ರಾಜ್ಯ

ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ತಮ್ಮ ಬಣಗಳನ್ನು ಕಟ್ಟಿಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಬಣ ರಾಜಕೀಯ ಮಾಡುವುದರಿಂದ ಪಕ್ಷದಲ್ಲಿ ಒಡಕು ಜಾಸ್ತಿಯಾಗುತ್ತದೆ. ಇದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವೇ ಇಲ್ಲ. ಬಣದ ಹೆಸರಿನಲ್ಲಿ ರಾಜಕೀಯ ಮಾಡುವುದು, ಸಭೆ, ಸಮಾರಂಭಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ನಿಲ್ಲಿಸಬೇಕು ಎಂದು ವಿನಂತಿಸುವೆ. ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ. ಅದನ್ನು ಒಡೆಯಲು ಪ್ರಯತ್ನಿಸಬೇಡಿ ಎಂದು ವಿನಂತಿಸಿದ್ದಾರೆ.

ಯಾವುದೇ ಸಭೆ, ಕಾರ್ಯಕ್ರಮಗಳು ಪಕ್ಷದ ಚೌಕಟ್ಟಿನಲ್ಲಿ ನಡೆಯಬೇಕೇ ವಿನಃ ಪಕ್ಷದ ಧ್ಯೇಯಗಳನ್ನು ವಿರೋಧಿಸಿ ನಡೆಯಬಾರದು. ಇದು ಪಕ್ಷದ ಆಶಯಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.

ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲವರ್ಧನೆಗೆ ಹಿರಿಯರು, ಸಚಿವರು, ಶಾಸಕರು, ಸೇರಿದಂತೆ ಎಲ್ಲರ ಸಮ್ಮುಖದಲ್ಲಿ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆಂದು ತಿಳಿಸಿದ್ದಾರೆ.

ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಿರ್ಧಾರಕ್ಕೆ ಕೈಹಾಕಿದ್ದು, ಪಕ್ಷದ ಬಲವರ್ಧನೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

1 hour ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago