ಬೆಂಗಳೂರು: ಬಿಜೆಪಿ ನಾಯಕರು ತಮ್ಮ ತಮ್ಮ ಬಣಗಳನ್ನು ಕಟ್ಟಿಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಬಣ ರಾಜಕೀಯ ಮಾಡುವುದರಿಂದ ಪಕ್ಷದಲ್ಲಿ ಒಡಕು ಜಾಸ್ತಿಯಾಗುತ್ತದೆ. ಇದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವೇ ಇಲ್ಲ. ಬಣದ ಹೆಸರಿನಲ್ಲಿ ರಾಜಕೀಯ ಮಾಡುವುದು, ಸಭೆ, ಸಮಾರಂಭಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ನಿಲ್ಲಿಸಬೇಕು ಎಂದು ವಿನಂತಿಸುವೆ. ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ. ಅದನ್ನು ಒಡೆಯಲು ಪ್ರಯತ್ನಿಸಬೇಡಿ ಎಂದು ವಿನಂತಿಸಿದ್ದಾರೆ.
ಯಾವುದೇ ಸಭೆ, ಕಾರ್ಯಕ್ರಮಗಳು ಪಕ್ಷದ ಚೌಕಟ್ಟಿನಲ್ಲಿ ನಡೆಯಬೇಕೇ ವಿನಃ ಪಕ್ಷದ ಧ್ಯೇಯಗಳನ್ನು ವಿರೋಧಿಸಿ ನಡೆಯಬಾರದು. ಇದು ಪಕ್ಷದ ಆಶಯಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.
ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲವರ್ಧನೆಗೆ ಹಿರಿಯರು, ಸಚಿವರು, ಶಾಸಕರು, ಸೇರಿದಂತೆ ಎಲ್ಲರ ಸಮ್ಮುಖದಲ್ಲಿ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆಂದು ತಿಳಿಸಿದ್ದಾರೆ.
ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಿರ್ಧಾರಕ್ಕೆ ಕೈಹಾಕಿದ್ದು, ಪಕ್ಷದ ಬಲವರ್ಧನೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…