ಬೆಂಗಳೂರು: ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯುತ್ತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.
ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್ ಚಾಲೀಸ ಕೇಳಿದರೆ, ಜೈ ಶ್ರೀರಾಮ್ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.
ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಈ ಸರ್ಕಾರ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆ ಮಾಡಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಮಣಿವಣ್ಣನ್ ಎಂಬ ಅಧಿಕಾರಿ ಕುವೆಂಪು ವಾಣಿಯನ್ನು ತಿದ್ದುವಂತಹ ಸ್ಥಿತಿ ಇದೆ ಎಂದರು.
ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್ಡೌನ್ ಶುರುವಾಗಿದೆ ಎಂದರು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…