ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ: ಆರ್‌. ಅಶೋಕ್‌

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯುತ್ತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.

ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್‌ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಈ ಸರ್ಕಾರ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆ ಮಾಡಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಮಣಿವಣ್ಣನ್‌ ಎಂಬ ಅಧಿಕಾರಿ ಕುವೆಂಪು ವಾಣಿಯನ್ನು ತಿದ್ದುವಂತಹ ಸ್ಥಿತಿ ಇದೆ ಎಂದರು.

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

19 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

27 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago