ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ: ಆರ್‌. ಅಶೋಕ್‌

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯುತ್ತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.

ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್‌ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಈ ಸರ್ಕಾರ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆ ಮಾಡಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಮಣಿವಣ್ಣನ್‌ ಎಂಬ ಅಧಿಕಾರಿ ಕುವೆಂಪು ವಾಣಿಯನ್ನು ತಿದ್ದುವಂತಹ ಸ್ಥಿತಿ ಇದೆ ಎಂದರು.

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

16 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago