ರಾಜ್ಯ

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ.

ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ.

ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.

ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ.

​ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

3 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

8 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

11 hours ago