ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಈ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ರೈತರಿಗೆ ಅಗತ್ಯದ ವೇಳೆಯಲ್ಲಿ ರಸಗೊಬ್ಬರ ಪೂರೈಸಬೇಕು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದರು.
ಇಂದು(ಜೂ.13) ವಿಧಾನಸೌಧದಲ್ಲಿ ಕೃಷಿ ಅಧಿಕಾರಿಗಳ ಸಭೆ ನಡೆಸಿ, ಬಿತ್ತನೆ ಬೀಜ, ರಸಗೊಬ್ಬರಗಳ ಬಗ್ಗೆ ಅಧಿಕಾರಿಗಳು ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಸಂಬಂಧ ಹಲವು ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಹಾಗೂ ಕಟಾವು ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಲಾನಯನ ಅಭಿವೃದ್ಧಿ ಆಯುಕ್ತ ಡಾ. ಗಿರೀಶ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ.ಪುತ್ರ, ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು..
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…
ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…
ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್ಸೇಠ್ ಹೇಳಿದರು. 5…
ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ…
ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ…
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…