ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಬೆಡ್ ಅಥವಾ ಔಷಧಿಯ ಕೊರತೆಯಿಲ್ಲ. ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ ಎಂದರು.
ಇನ್ನೂ ಎರಡು ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫಿವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಓಗಳಿಗೆ ಸೂಚಿಸಲಾಗಿದೆ.
ಔಷಧಿಗಳ ಲಭ್ಯತೆಯಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಹೆಚ್ಚು ಹೆಚ್ಚು ಜಾಗೃತರಾಗಿ ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸುವುದೇ ಮುಖ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…