ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಬೆಡ್ ಅಥವಾ ಔಷಧಿಯ ಕೊರತೆಯಿಲ್ಲ. ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ ಎಂದರು.
ಇನ್ನೂ ಎರಡು ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫಿವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಓಗಳಿಗೆ ಸೂಚಿಸಲಾಗಿದೆ.
ಔಷಧಿಗಳ ಲಭ್ಯತೆಯಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಹೆಚ್ಚು ಹೆಚ್ಚು ಜಾಗೃತರಾಗಿ ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸುವುದೇ ಮುಖ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…