ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆ ಹುದ್ದೆಯನ್ನು ತೆಗೆದು ನಮಗೆ ಕೊಡಿ ಎಂದು ಯಾರೂ ಕೇಳುತ್ತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಎಲ್ಲವೂ ಊಹಾಪೋಹದ ಸುದ್ದಿ ಎಂದರು.
ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಹುದ್ದೆಯನ್ನು ಕೇಳಲು ಎಲ್ಲರಿಗೂ ಹಕ್ಕಿದೆ. ಹೀಗಾಗಿ ದಲಿತ ಸಿಎಂ ಆಗಬೇಕೆಂದು ಹೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:-ಮೈಸೂರಿನಲ್ಲಿ ಹೆಚ್ಚುತ್ತಿರುವ ಹುಲಿ ಓಡಾಟ ವದಂತಿ: ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ
ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಸಿದ್ದರಾಮಯ್ಯ ಅವರು ರಾಜ್ಯವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ನಾನು ಸೇರಿದಂತೆ ಎಲ್ಲರೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳು. ಯಾವುದೇ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ನಮ್ಮ ಸಮರ್ಥವಾಗಿರುವ ಹೈಕಮಾಂಡ್ ಕೈಗೊಳ್ಳಲಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕು ಅಭಿಪ್ರಾಯ ಮಂಡಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ. ಅದರಂತೆ ನಮ್ಮ ಪಕ್ಷಕ್ಕೆ ಆಂತರಿಕ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆ. ಇದರ ನೆಲೆಗಟ್ಟಿನಲ್ಲಿ ಹೈಕಮಾಂಡ್ ಸಮರ್ಥ ನಿರ್ಧಾರ ಕೈಗೊಳ್ಳುತ್ತದೆ ಎಂದು ಪುನರುಚ್ಚರಿಸಿದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…