ರಾಜ್ಯ

ಸತ್ತು ಹೋದ ಬಿಜೆಪಿ ಪಕ್ಷದಲ್ಲಿ ಯಾವ ಕಂಪನವೂ ಇಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಳಗಾವಿ : ಬಿಜೆಪಿಯಲ್ಲಿ ಒಂದು ರೀತಿ ಅತಂತ್ರತೆ ಕಾಡುತ್ತಿದ್ದು, ವಿರೋಧ ಪಕ್ಷದ ನಾಯಕರಿಲ್ಲದೇ ಬಿಜೆಪಿ ಡೆಡ್ ಆಗಿದೆ. ಸತ್ತು ಹೋದ ಬಿಜೆಪಿ ಪಕ್ಷದಲ್ಲಿ ಯಾವ ಕಂಪನವೂ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎರಡೂವರೆ ವರ್ಷದ ಬಳಿಕ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ. ಊಹಾಪೋಹಗಳ ಬಗ್ಗೆ ನಾವು ಗಮನ ಕೊಡುವುದಿಲ್ಲ. ಸರ್ಕಾರ ಸುಭದ್ರವಾಗಿದೆ. ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಯುವನಿಧಿಯನ್ನ ಜನವರಿಯಿಂದ ಜಾರಿ ಮಾಡುತ್ತೇವೆ ಎಂದರು.

ಐದು ವರ್ಷ ಸಿದ್ದರಾಮಯ್ಯನವರು ಸಿಎಂ ಇರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಹೈಕಮಾಂಡ್ ಅಲ್ಲ. ಆದರೆ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುತ್ತೆ. ಐದು ವರ್ಷಗಳ ಕಾಲ ಸರ್ಕಾರ ಬೀಳಿಸುವುದು ಅಸಾಧ್ಯ. ಅದು ಬಿಜೆಪಿಯವರ ಕಸುಬು. ಆಪರೇಷನ್ ಕಮಲ ಮಾಡಿ ರುಚಿ ಹಿಡಿದಿದೆ. ಅನೇಕ ರಾಜ್ಯಗಳಲ್ಲಿ ಅಧಿಕಾರ ಹಿಡಿದಿದ್ದಾರೆ. ಅವರ ಆಶಯ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದರು.

ಎರಡೂವರೆ ವರ್ಷ ಬಳಿಕ ಸಿಎಂ ಬದಲಾವಣೆ ಒಪ್ಪಂದ ಆಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಒಪ್ಪಂದವೂ ಆಗಿಲ್ಲ. ಶಾಸಕರ ಅಭಿಪ್ರಾಯ ತೆಗೆದುಕೊಂಡು, ಹೈಕಮಾಂಡ್ ಆಯ್ಕೆ ಮೇಲೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮಂತ್ರಿ ಅಗಬೇಕು ಅನ್ನೋ ಆಸೆಯಿಂದ ಶಾಸಕರು ಮಾತಾಡಿದರೆ ಮುಂದಿನ ದಿನಗಳಲ್ಲಿ ಅವರಿಗೆ ಅದು ನೆಗೆಟಿವ್ ಆಗಲಿದೆ. ಕಾಂಗ್ರೆಸ್ ನಲ್ಲಿ ನಾಯಕತ್ವದ ರೇಸ್ ಇಲ್ಲ. ನಾನು ನಿಷ್ಠಾವಂತನಾಗಿ ಸಾಯುವವರೆಗೂ ಕಾಂಗ್ರೆಸ್ ನಲ್ಲಿರುತ್ತೇನೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ಬಣ್ಣ ಈಗ ಬಯಲಾಗಿದೆ. ತಾವಿಬ್ಬರೂ ಸೇರದಿದ್ದರೆ ಉಳಿಗಾಲವಿಲ್ಲ ಎಂದು ಹೆದರಿ ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಅನುಕೂಲವಾಗಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಆಟಕ್ಕೆ ಫುಲ್ ಸ್ಟಾಪ್ ಇಡಲಿದ್ದಾರೆ ಎಂದರು.

ಸಚಿವ ಜಿ.ಪರಮೇಶ್ವರ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಆಯೋಜಿಸಿರುವ ಡಿನ್ನರ್ ಪಾರ್ಟಿಗೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸದ ಕುರಿತು ಪ್ರತಿಕ್ರಿಯಿಸಿದ ಮೊಯ್ಲಿ, ‘ಇದು ಸೌಹಾರ್ದಯುತ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಎಲ್ಲ ನಾಯಕರನ್ನೂ ಇದಕ್ಕೆ ಆಹ್ವಾನಿಸಬೇಕು ಎಂದೇನೂ ಇಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ’ ಎಂದು ಉತ್ತರಿಸಿದರು.

ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ಹೋಗ್ತಿರುವ ವಿಚಾರವಾಗಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರ ಬಳಿ ನಾನು ಸಮಾಲೋಚನೆ ಮಾಡಿಲ್ಲ. ಅವರ ವೈಯಕ್ತಿಕ ವಿಚಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಲ್ಲ. ನಾನು ಅಧಿಕ ಪ್ರಸಂಗದ ರಾಜಕಾರಣಿ ಅಲ್ಲ ಎಂದರು.

andolanait

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

2 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

2 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

2 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

3 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

3 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

3 hours ago