ರಾಜ್ಯ

ಸತ್ತು ಹೋದ ಬಿಜೆಪಿ ಪಕ್ಷದಲ್ಲಿ ಯಾವ ಕಂಪನವೂ ಇಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಳಗಾವಿ : ಬಿಜೆಪಿಯಲ್ಲಿ ಒಂದು ರೀತಿ ಅತಂತ್ರತೆ ಕಾಡುತ್ತಿದ್ದು, ವಿರೋಧ ಪಕ್ಷದ ನಾಯಕರಿಲ್ಲದೇ ಬಿಜೆಪಿ ಡೆಡ್ ಆಗಿದೆ. ಸತ್ತು ಹೋದ ಬಿಜೆಪಿ ಪಕ್ಷದಲ್ಲಿ ಯಾವ ಕಂಪನವೂ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎರಡೂವರೆ ವರ್ಷದ ಬಳಿಕ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ. ಊಹಾಪೋಹಗಳ ಬಗ್ಗೆ ನಾವು ಗಮನ ಕೊಡುವುದಿಲ್ಲ. ಸರ್ಕಾರ ಸುಭದ್ರವಾಗಿದೆ. ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಯುವನಿಧಿಯನ್ನ ಜನವರಿಯಿಂದ ಜಾರಿ ಮಾಡುತ್ತೇವೆ ಎಂದರು.

ಐದು ವರ್ಷ ಸಿದ್ದರಾಮಯ್ಯನವರು ಸಿಎಂ ಇರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಹೈಕಮಾಂಡ್ ಅಲ್ಲ. ಆದರೆ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುತ್ತೆ. ಐದು ವರ್ಷಗಳ ಕಾಲ ಸರ್ಕಾರ ಬೀಳಿಸುವುದು ಅಸಾಧ್ಯ. ಅದು ಬಿಜೆಪಿಯವರ ಕಸುಬು. ಆಪರೇಷನ್ ಕಮಲ ಮಾಡಿ ರುಚಿ ಹಿಡಿದಿದೆ. ಅನೇಕ ರಾಜ್ಯಗಳಲ್ಲಿ ಅಧಿಕಾರ ಹಿಡಿದಿದ್ದಾರೆ. ಅವರ ಆಶಯ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದರು.

ಎರಡೂವರೆ ವರ್ಷ ಬಳಿಕ ಸಿಎಂ ಬದಲಾವಣೆ ಒಪ್ಪಂದ ಆಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಒಪ್ಪಂದವೂ ಆಗಿಲ್ಲ. ಶಾಸಕರ ಅಭಿಪ್ರಾಯ ತೆಗೆದುಕೊಂಡು, ಹೈಕಮಾಂಡ್ ಆಯ್ಕೆ ಮೇಲೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮಂತ್ರಿ ಅಗಬೇಕು ಅನ್ನೋ ಆಸೆಯಿಂದ ಶಾಸಕರು ಮಾತಾಡಿದರೆ ಮುಂದಿನ ದಿನಗಳಲ್ಲಿ ಅವರಿಗೆ ಅದು ನೆಗೆಟಿವ್ ಆಗಲಿದೆ. ಕಾಂಗ್ರೆಸ್ ನಲ್ಲಿ ನಾಯಕತ್ವದ ರೇಸ್ ಇಲ್ಲ. ನಾನು ನಿಷ್ಠಾವಂತನಾಗಿ ಸಾಯುವವರೆಗೂ ಕಾಂಗ್ರೆಸ್ ನಲ್ಲಿರುತ್ತೇನೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ಬಣ್ಣ ಈಗ ಬಯಲಾಗಿದೆ. ತಾವಿಬ್ಬರೂ ಸೇರದಿದ್ದರೆ ಉಳಿಗಾಲವಿಲ್ಲ ಎಂದು ಹೆದರಿ ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಅನುಕೂಲವಾಗಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಆಟಕ್ಕೆ ಫುಲ್ ಸ್ಟಾಪ್ ಇಡಲಿದ್ದಾರೆ ಎಂದರು.

ಸಚಿವ ಜಿ.ಪರಮೇಶ್ವರ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಆಯೋಜಿಸಿರುವ ಡಿನ್ನರ್ ಪಾರ್ಟಿಗೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸದ ಕುರಿತು ಪ್ರತಿಕ್ರಿಯಿಸಿದ ಮೊಯ್ಲಿ, ‘ಇದು ಸೌಹಾರ್ದಯುತ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಎಲ್ಲ ನಾಯಕರನ್ನೂ ಇದಕ್ಕೆ ಆಹ್ವಾನಿಸಬೇಕು ಎಂದೇನೂ ಇಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ’ ಎಂದು ಉತ್ತರಿಸಿದರು.

ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ಹೋಗ್ತಿರುವ ವಿಚಾರವಾಗಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರ ಬಳಿ ನಾನು ಸಮಾಲೋಚನೆ ಮಾಡಿಲ್ಲ. ಅವರ ವೈಯಕ್ತಿಕ ವಿಚಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಲ್ಲ. ನಾನು ಅಧಿಕ ಪ್ರಸಂಗದ ರಾಜಕಾರಣಿ ಅಲ್ಲ ಎಂದರು.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

40 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago