Our government is secure Dinesh Gundu Rao clarifies
ಬೆಂಗಳೂರು : ಪಹಲ್ಗಾಮ್ ದಾಳಿಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಅಷ್ಟು ಬಹಿರಂಗವಾಗಿ ಭಯೋತ್ಪಾದಕ ದಾಳಿಯಾಗಲು ಅವಕಾಶ ಮಾಡಿಕೊಟ್ಟಿದ್ದೇಕೆ ಎಂಬ ಬಗ್ಗೆ ಈವರೆಗೂ ಉತ್ತರ ದೊರೆತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಲ್ವಾಮದಲ್ಲಿ 40 ಸೈನಿಕರ ಸಾವಿನ ಬಗ್ಗೆ ಈವರೆಗೂ ಸ್ಪಷ್ಟತೆ ಇಲ್ಲ. ಆರೋಪಿಗಳ್ಯಾರು ಎಂಬುದನ್ನು ತಿಳಿಸಲಾಗಿಲ್ಲ. ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯ ಬಗ್ಗೆಯೂ ನಿಖರತೆ ಇಲ್ಲವಾಗಿದೆ. ಯಾವುದಕ್ಕೂ ಕೇಂದ್ರ ಸರ್ಕಾರ ಉತ್ತರ ನೀಡುತ್ತಿಲ್ಲ. ಎಷ್ಟು ವಿಮಾನಗಳು ನಾಶವಾದವು ಎಂಬುದು ಈವರೆಗೂ ಅಸ್ಪಷ್ಟತೆಯಿಂದಲೇ ಕೂಡಿದೆ ಎಂದರು.
ಕದನ ವಿರಾಮಕ್ಕೆ ತಾವು ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದಾರೆ. ಪಾಕಿಸ್ತಾನ ಭಾರತದ 5 ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ತಿಳಿಸಿದೆ. ಇದ್ಯಾವುದನ್ನೂ ಕೇಂದ್ರ ಸರ್ಕಾರ ನಡೆದಿದೆ ಅಥವಾ ನಡೆದಿಲ್ಲ ಎಂದು ಖಚಿತವಾಗಿ ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…