ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ನಡೆಸಲು ಸಾಧ್ಯವಿಲ್ಲ. ಎಸ್ಐಟಿಯಿಂದ ಇದು ಖಂಡಿತಾ ಅಸಾಧ್ಯ. ಆದ್ದತಿಂದ ಹನಿಟ್ರ್ಯಾಪ್ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಆಡಳಿತ ಪಕ್ಷದ ಸದಸ್ಯರು ಹಾಗೂ ಸಹಕಾರಿ ಸಚಿವರಾದ ರಾಜಣ್ಣ ಅವರು ಬಹಳ ಗಂಭೀರವಾದ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗೃಹ ಸಚಿವರು ಇದರ ಬಗ್ಗೆ ಮಾತನಾಡಿದ್ದಾರೆ. ಪಕ್ಷಾತೀತವಾಗಿ ಇದರ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ. 48-49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…