ರಾಜ್ಯ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸೌಹಾರ್ದತೆ ಇರಬೇಕು: ಆರ್.‌ ಅಶೋಕ್

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷದ ಬದಲು ಸೌಹರ್ದತೆ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸಿಎಂ ಸಿದ್ದರಾಮಯ್ಯಗೆ ಕಿವಿಮಾತು ಹೇಳಿದರು.

ಇಂದು( ಜೂ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ದಿನ ಟೀಕಿಸಿ ಈಗ ಸಭೆ ಮಾಡುತ್ತಿದ್ದಾರೆ. ಅಧಿಕಾರ ಇಂದು ಬರುತ್ತದೆ, ಮುಂದೆ ಹೋಗುತ್ತದೆ. ಹೀಗೆ ಸಂಘರ್ಷ ಮಾಡಿಕೊಳ್ಳಲು ಇದು ಭಾರತ-ಪಾಕಿಸ್ತಾನ ಅಲ್ಲ. ಕರ್ನಾಟಕದಲ್ಲಿ ಯಾವುದೇ ಪಕ್ಷ ದೀರ್ಘವಾಗಿ ಆಡಳಿತ ನಡೆಸಿಲ್ಲ. ಇದು ಬದಲಾಗುತ್ತಲೇ ಇರುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ನೀಡಿರುವ ಹಣವನ್ನೇ ಖರ್ಚು ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ಭ್ರಷ್ಟ, ದುಷ್ಟ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿಯೇ ಒಬ್ಬ ಸಚಿವರನ್ನು ಬೀಳಿಸಿದ್ದೇವೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬೀಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪೆಟ್ರೋಲ್‌ ದರ ಏರಿಕೆ, ಹಾಲಿನ ದರ ಏರಿಕೆ, ಸ್ಟಾಂಪ್‌ ಡ್ಯೂಟಿ, ಹೀಗೆ ಎಲ್ಲ ದರ ಏರಿಕೆಗೂ ಕಾಂಗ್ರೆಸ್‌ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಬಡವರು ಕುಡಿಯುವ ಮದ್ಯದ ದರ ಏರಿಸಿ, ಶ್ರೀಮಂತರ ಮದ್ಯಗಳ ದರ ಇಳಿಕೆ ಮಾಡಿದ್ದಾರೆ. ಇದೇ ಸರ್ಕಾರ ಇನ್ನೂ ಅಧಿಕಾರದಲ್ಲಿ ಇದ್ದರೆ ಕರ್ನಾಟಕದ ಹಣ ಕೊಳ್ಳೆ ಹೊಡೆದು ದೆಹಲಿಗೆ ತೆಗೆದುಕೊಂಡು ಹೋಗುತ್ತದೆ. ಇವರೆಲ್ಲರೂ ಆಲಿಬಾಬ ಮತ್ತು ನಲ್ವತ್ತು ಕಳ್ಳರು ಎಂದರು.

ಈಗ ಹಾಲು ದರ ಏರಿಕೆಯಿಂದ ಹಾಲಾಹಲ ಆಗಿದೆ. ದೇಶಕ್ಕೆ ಅರ್ಥಶಾಸ್ತ್ರದ ಪಾಠ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 50 ಮಿಲಿ ಲೀಟರ್‌ ಹಾಲು ಕಡಿಮೆ ನೀಡಿ ಎರಡು ರೂಪಾಯಿ ಕಡಿಮೆ ಮಾಡಲಿ. ಹಾಲು ಜಾಸ್ತಿ ಕೊಡಿ ಎಂದು ಮುಖ್ಯಮಂತ್ರಿಗಳ ಬಳಿ ಯಾರೂ ಅರ್ಜಿ ಕೊಟ್ಟಿಲ್ಲ. ಮಳೆಗಾಲ ಬಂದಾಗ ಮೇವು ಹೆಚ್ಚಾಗಿ ಹಾಲು ಹೆಚ್ಚಳವಾಗುವುದು ಸಹಜ. ಅದನ್ನು ಪುಡಿ ಮಾಡುವುದು, ಅಂಗನವಾಡಿಗೆ ಕೊಡುವುದು, ರಫ್ತು ಮಾಡುವುದು ಮೊದಲಾದ ಕ್ರಮಗಳನ್ನು ಸರ್ಕಾರ ಅನುಸರಿಸಬೇಕಿತ್ತು. ಮುಖ್ಯಮಂತ್ರಿಗೆ ಸಹಾಯ ಮಾಡುವ ಬುದ್ಧಿ ಇಲ್ಲ, ಆದರೆ ದುಡ್ಡು ಹೊಡೆಯುವ ಬುದ್ಧಿ ಇದೆ. ಜನರು ಸರ್ಕಾರಕ್ಕೆ ಕಪಾಳಕ್ಕೆ ಬಾರಿಸಬೇಕಿದೆ. 15 ಬಜೆಟ್‌ ಮಂಡಿಸಿದ ಸಿದ್ದರಾಮಯ್ಯನವರ ಅರ್ಥಶಾಸ್ತ್ರ ಇದೇ ಎಂದು ಟೀಕಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

41 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago