ರಾಜ್ಯ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸೌಹಾರ್ದತೆ ಇರಬೇಕು: ಆರ್.‌ ಅಶೋಕ್

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷದ ಬದಲು ಸೌಹರ್ದತೆ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸಿಎಂ ಸಿದ್ದರಾಮಯ್ಯಗೆ ಕಿವಿಮಾತು ಹೇಳಿದರು.

ಇಂದು( ಜೂ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ದಿನ ಟೀಕಿಸಿ ಈಗ ಸಭೆ ಮಾಡುತ್ತಿದ್ದಾರೆ. ಅಧಿಕಾರ ಇಂದು ಬರುತ್ತದೆ, ಮುಂದೆ ಹೋಗುತ್ತದೆ. ಹೀಗೆ ಸಂಘರ್ಷ ಮಾಡಿಕೊಳ್ಳಲು ಇದು ಭಾರತ-ಪಾಕಿಸ್ತಾನ ಅಲ್ಲ. ಕರ್ನಾಟಕದಲ್ಲಿ ಯಾವುದೇ ಪಕ್ಷ ದೀರ್ಘವಾಗಿ ಆಡಳಿತ ನಡೆಸಿಲ್ಲ. ಇದು ಬದಲಾಗುತ್ತಲೇ ಇರುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ನೀಡಿರುವ ಹಣವನ್ನೇ ಖರ್ಚು ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ಭ್ರಷ್ಟ, ದುಷ್ಟ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿಯೇ ಒಬ್ಬ ಸಚಿವರನ್ನು ಬೀಳಿಸಿದ್ದೇವೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬೀಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪೆಟ್ರೋಲ್‌ ದರ ಏರಿಕೆ, ಹಾಲಿನ ದರ ಏರಿಕೆ, ಸ್ಟಾಂಪ್‌ ಡ್ಯೂಟಿ, ಹೀಗೆ ಎಲ್ಲ ದರ ಏರಿಕೆಗೂ ಕಾಂಗ್ರೆಸ್‌ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಬಡವರು ಕುಡಿಯುವ ಮದ್ಯದ ದರ ಏರಿಸಿ, ಶ್ರೀಮಂತರ ಮದ್ಯಗಳ ದರ ಇಳಿಕೆ ಮಾಡಿದ್ದಾರೆ. ಇದೇ ಸರ್ಕಾರ ಇನ್ನೂ ಅಧಿಕಾರದಲ್ಲಿ ಇದ್ದರೆ ಕರ್ನಾಟಕದ ಹಣ ಕೊಳ್ಳೆ ಹೊಡೆದು ದೆಹಲಿಗೆ ತೆಗೆದುಕೊಂಡು ಹೋಗುತ್ತದೆ. ಇವರೆಲ್ಲರೂ ಆಲಿಬಾಬ ಮತ್ತು ನಲ್ವತ್ತು ಕಳ್ಳರು ಎಂದರು.

ಈಗ ಹಾಲು ದರ ಏರಿಕೆಯಿಂದ ಹಾಲಾಹಲ ಆಗಿದೆ. ದೇಶಕ್ಕೆ ಅರ್ಥಶಾಸ್ತ್ರದ ಪಾಠ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 50 ಮಿಲಿ ಲೀಟರ್‌ ಹಾಲು ಕಡಿಮೆ ನೀಡಿ ಎರಡು ರೂಪಾಯಿ ಕಡಿಮೆ ಮಾಡಲಿ. ಹಾಲು ಜಾಸ್ತಿ ಕೊಡಿ ಎಂದು ಮುಖ್ಯಮಂತ್ರಿಗಳ ಬಳಿ ಯಾರೂ ಅರ್ಜಿ ಕೊಟ್ಟಿಲ್ಲ. ಮಳೆಗಾಲ ಬಂದಾಗ ಮೇವು ಹೆಚ್ಚಾಗಿ ಹಾಲು ಹೆಚ್ಚಳವಾಗುವುದು ಸಹಜ. ಅದನ್ನು ಪುಡಿ ಮಾಡುವುದು, ಅಂಗನವಾಡಿಗೆ ಕೊಡುವುದು, ರಫ್ತು ಮಾಡುವುದು ಮೊದಲಾದ ಕ್ರಮಗಳನ್ನು ಸರ್ಕಾರ ಅನುಸರಿಸಬೇಕಿತ್ತು. ಮುಖ್ಯಮಂತ್ರಿಗೆ ಸಹಾಯ ಮಾಡುವ ಬುದ್ಧಿ ಇಲ್ಲ, ಆದರೆ ದುಡ್ಡು ಹೊಡೆಯುವ ಬುದ್ಧಿ ಇದೆ. ಜನರು ಸರ್ಕಾರಕ್ಕೆ ಕಪಾಳಕ್ಕೆ ಬಾರಿಸಬೇಕಿದೆ. 15 ಬಜೆಟ್‌ ಮಂಡಿಸಿದ ಸಿದ್ದರಾಮಯ್ಯನವರ ಅರ್ಥಶಾಸ್ತ್ರ ಇದೇ ಎಂದು ಟೀಕಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

16 mins ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

42 mins ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

2 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

2 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago