janata dal (secular)
ಬೆಂಗಳೂರು: ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಒಂದು ಲಕ್ಷ ಲೀಡ್ʼನಲ್ಲಿ ನೀವು ಗೆದ್ದಾಗ ಅಕ್ರಮ ನಡೆದಿರಲಿಲ್ಲವೇ? ಎಂದು ಜೆಡಿಎಸ್ ಪಕ್ಷವು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಪ್ರಶ್ನಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಹೇಳುವ ಡಿಕೆಶಿ ಅವರೇ, ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ಅಮೇಥಿಯಲ್ಲೂ ಅಕ್ರಮ ನಡೆದಿರಬೇಕಲ್ಲವೇ? ಎಂದು ಕೇಳಿದೆ.
2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ, ಫಲಿತಾಂಶಕ್ಕೂ ಒಂದು ತಿಂಗಳ ಮೊದಲೇ ಕಾಂಗ್ರೆಸ್ ಪಕ್ಷ 136 ಸೀಟುಗಳನ್ನು ಪಡೆಯುತ್ತದೆ ಎಂದು ತಾವು ಪದೇ ಪದೇ ಹೇಳುತ್ತಿದ್ದರಲ್ಲ. ಅದು ಹೇಗೆ ಅಷ್ಟು ನಿಖರವಾಗಿ ಹೇಳಲು ಸಾಧ್ಯ? ಇಲ್ಲೂ ಗೋಲ್ಮಾಲ್ ನಡೆದಿರಬೇಕಲ್ಲವೇ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರಶ್ನಿಸಿದೆ?
ಚುನಾವಣೆಯಲ್ಲಿ ಗೆದ್ದಾಗ ಜನಾಶೀರ್ವಾದ ಎಂದು ಸಂಭ್ರಮಿಸುವ ಕಾಂಗ್ರೆಸ್ಸಿಗರೇ, ಸೋತಾಗ ಮಾತ್ರ ಚುನಾವಣಾ ಅಕ್ರಮ ಎಂದು ಬೊಬ್ಬೆ ಹಾಕಿ ಮೊಸಳೆ ಕಣ್ಣೀರು ಸುರಿಸುವುದು ಅಭ್ಯಾಸವಾಗಿದೆ. ಕಾಂಗ್ರೆಸ್ಸಿಗರು ಸದಾ ಚುನಾವಣಾ ಆಯೋಗವನ್ನು ದೂರುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಎಂದು ಆರೋಪಿಸಿದೆ.
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…