janata dal (secular)
ಬೆಂಗಳೂರು: ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಒಂದು ಲಕ್ಷ ಲೀಡ್ʼನಲ್ಲಿ ನೀವು ಗೆದ್ದಾಗ ಅಕ್ರಮ ನಡೆದಿರಲಿಲ್ಲವೇ? ಎಂದು ಜೆಡಿಎಸ್ ಪಕ್ಷವು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಪ್ರಶ್ನಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಹೇಳುವ ಡಿಕೆಶಿ ಅವರೇ, ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ಅಮೇಥಿಯಲ್ಲೂ ಅಕ್ರಮ ನಡೆದಿರಬೇಕಲ್ಲವೇ? ಎಂದು ಕೇಳಿದೆ.
2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ, ಫಲಿತಾಂಶಕ್ಕೂ ಒಂದು ತಿಂಗಳ ಮೊದಲೇ ಕಾಂಗ್ರೆಸ್ ಪಕ್ಷ 136 ಸೀಟುಗಳನ್ನು ಪಡೆಯುತ್ತದೆ ಎಂದು ತಾವು ಪದೇ ಪದೇ ಹೇಳುತ್ತಿದ್ದರಲ್ಲ. ಅದು ಹೇಗೆ ಅಷ್ಟು ನಿಖರವಾಗಿ ಹೇಳಲು ಸಾಧ್ಯ? ಇಲ್ಲೂ ಗೋಲ್ಮಾಲ್ ನಡೆದಿರಬೇಕಲ್ಲವೇ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರಶ್ನಿಸಿದೆ?
ಚುನಾವಣೆಯಲ್ಲಿ ಗೆದ್ದಾಗ ಜನಾಶೀರ್ವಾದ ಎಂದು ಸಂಭ್ರಮಿಸುವ ಕಾಂಗ್ರೆಸ್ಸಿಗರೇ, ಸೋತಾಗ ಮಾತ್ರ ಚುನಾವಣಾ ಅಕ್ರಮ ಎಂದು ಬೊಬ್ಬೆ ಹಾಕಿ ಮೊಸಳೆ ಕಣ್ಣೀರು ಸುರಿಸುವುದು ಅಭ್ಯಾಸವಾಗಿದೆ. ಕಾಂಗ್ರೆಸ್ಸಿಗರು ಸದಾ ಚುನಾವಣಾ ಆಯೋಗವನ್ನು ದೂರುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಎಂದು ಆರೋಪಿಸಿದೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…