janata dal (secular)
ಬೆಂಗಳೂರು: ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಒಂದು ಲಕ್ಷ ಲೀಡ್ʼನಲ್ಲಿ ನೀವು ಗೆದ್ದಾಗ ಅಕ್ರಮ ನಡೆದಿರಲಿಲ್ಲವೇ? ಎಂದು ಜೆಡಿಎಸ್ ಪಕ್ಷವು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಪ್ರಶ್ನಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಹೇಳುವ ಡಿಕೆಶಿ ಅವರೇ, ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ಅಮೇಥಿಯಲ್ಲೂ ಅಕ್ರಮ ನಡೆದಿರಬೇಕಲ್ಲವೇ? ಎಂದು ಕೇಳಿದೆ.
2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ, ಫಲಿತಾಂಶಕ್ಕೂ ಒಂದು ತಿಂಗಳ ಮೊದಲೇ ಕಾಂಗ್ರೆಸ್ ಪಕ್ಷ 136 ಸೀಟುಗಳನ್ನು ಪಡೆಯುತ್ತದೆ ಎಂದು ತಾವು ಪದೇ ಪದೇ ಹೇಳುತ್ತಿದ್ದರಲ್ಲ. ಅದು ಹೇಗೆ ಅಷ್ಟು ನಿಖರವಾಗಿ ಹೇಳಲು ಸಾಧ್ಯ? ಇಲ್ಲೂ ಗೋಲ್ಮಾಲ್ ನಡೆದಿರಬೇಕಲ್ಲವೇ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರಶ್ನಿಸಿದೆ?
ಚುನಾವಣೆಯಲ್ಲಿ ಗೆದ್ದಾಗ ಜನಾಶೀರ್ವಾದ ಎಂದು ಸಂಭ್ರಮಿಸುವ ಕಾಂಗ್ರೆಸ್ಸಿಗರೇ, ಸೋತಾಗ ಮಾತ್ರ ಚುನಾವಣಾ ಅಕ್ರಮ ಎಂದು ಬೊಬ್ಬೆ ಹಾಕಿ ಮೊಸಳೆ ಕಣ್ಣೀರು ಸುರಿಸುವುದು ಅಭ್ಯಾಸವಾಗಿದೆ. ಕಾಂಗ್ರೆಸ್ಸಿಗರು ಸದಾ ಚುನಾವಣಾ ಆಯೋಗವನ್ನು ದೂರುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಎಂದು ಆರೋಪಿಸಿದೆ.
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…