caste census g parameshwara
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದೆವು. ಆ ವೇಳೆ ರಾಜಕೀಯವಾಗಿ ಏನು ಚರ್ಚೆ ಆಗಿಲ್ಲ. ಕೇವಲ ಊಟದ್ದೇ ಚರ್ಚೆ ಆಗಿದೆ ಎಂದು ಹೇಳಿದರು.
ಇನ್ನು ಮತ್ತೆ ಸಂಪುಟಕ್ಕೆ ಕೆ.ಎನ್.ರಾಜಣ್ಣ ಸೇರ್ಪಡೆಯಾಗಲಿದ್ದಾರ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವತ್ತೂ ರಾಜಣ್ಣಗೆ ಸಿಹಿನೇ ಕೋಡೋದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಆಯ್ತಲ್ಲ ಎಂದು ಹೇಳಿದರು.
ಇನ್ನು ಡಿಸಿಎಂ ಡಿಕೆಶಿ ಹೈಕಮಾಂಡ್ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಖರ್ಗೆ ಆದೇಶದ ಮೇರೆಗೆ ದೆಹಲಿಗೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ಗೆ ಅಸ್ಸಾಂ ಚುನಾವಣೆ ಉಸ್ತುವಾರಿ ನೀಡಿದ್ದಾರೆ. ಈ ಕುರಿತು ಚರ್ಚೆ ಮಾಡೋಕೆ ಹೋಗಿದ್ದಾರೆ. ಅದು ಬಿಟ್ಟು ಬೇರೆ ವಿಷಯ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…
ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…