ರಾಜ್ಯ

ನಾಳೆಯಿಂದ ಯಾವುದೇ ಗೊಂದಲ ಇರಲ್ಲ: ಒಗ್ಗಟ್ಟಿನ ಸಂದೇಶ ಸಾರಿದ ಸಿದ್ದು ಹಾಗೂ ಡಿಕೆಶಿ

ಬೆಂಗಳೂರು: ನಾಳೆಯಿಂದ ಯಾವ ಗೊಂದಲವೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದರು.

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬೆಳಗಿನ ಉಪಹಾರ ಸೇವಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಇದನ್ನು ಓದಿ: ಒಗ್ಗಟ್ಟಿನ ಸಂದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌

ಈ ವೇಳೆ ಇಬ್ಬರು ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೊದಲಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಿಂದೆಯೂ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇಲ್ಲ. ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿದೆ. 2028ರ ವಿಧಾನಸಭಾ ಚುನಾವಣೆ ನಮಗೆ ಬಹಳ ಮುಖ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಮುಂದಿನ ಚುನಾವಣೆಗೂ ನಾನು ಹಾಗೂ ಡಿಕೆಶಿ ಒಟ್ಟಿಗೆ ಹೋಗುತ್ತೇವೆ. ಸುಳ್ಳು ಅಪವಾದ ಆರೋಪ ಬಿಜೆಪಿ-ಜೆಡಿಎಸ್‌ನವರ ಚಾಳಿ. ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ. ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಹೇಳಿದರು.

ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಹೈಕಮಾಂಡ್‌ ತೀರ್ಮಾನದಂತೆ ನಾವು ಕೆಲಸ ಮಾಡುತ್ತೇವೆ. ಗುಂಪುಗಾರಿಕೆ ಮಾಡುವ ಅವಶ್ಯಕತೆ ನನಗೆ ಇಲ್ಲ. ಯಾವ ಗುಂಪಿಗೂ ನಾನು ಅವಕಾಶ ಕೊಡಲ್ಲ. ನಾಳೆಯಿಂದ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

 

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago