ರಾಜ್ಯ

ಮೈಸೂರು ಪ್ರಯಾಣಿಕರೇ ಗಮನಿಸಿ ಜನವರಿ 20ರಂದು ವಿಳಂಬವಾಗಲಿದೆ ಈ ರೈಲುಗಳ ಸಂಚಾರ

ಭಾರತೀಯ ರೈಲ್ವೆ ಇಲಾಖೆ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣದಿಂದಾಗಿ ಕೆಲ ರೈಲುಗಳ ಸಂಚಾರ ವಿಳಂಬವಾಗಲಿದೆ ಹಾಗೂ ಕೆಲ ರೈಲುಗಳು ಭಾಗಶಃ ರದ್ದಾದರೆ, ಇನ್ನೂ ಕೆಲ ರೈಲುಗಳು ಸಂಪೂರ್ಣವಾಗಿ ರದ್ದಾಗಲಿವೆ. ಇನ್ನು ಮೈಸೂರು ರೈಲ್ವೆ ವ್ಯಾಪ್ತಿಯ ಮಂದಗೆರೆ ನಿಲ್ದಾಣದಲ್ಲಿ ಸಿಗ್ನಲಿಂಗ್‌ ಕಾಮಗಾರಿ ನಡೆಯುವುದರಿಂದ ಜನವರಿ 20ರಂದು ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಇರಲಿದೆ. ಈ ಕುರಿತಾದ ಮಾಹಿತಿಯನ್ನು ರೈಲ್ವೆ ಇಲಾಖೆ ಹಂಚಿಕೊಂಡಿದ್ದು, ಕೆಳಕಂಡಂತಿದೆ.. 

* ರೈಲು ಸಂಖ್ಯೆ 16207 ಯಶವಂತಪುರ – ಮೈಸೂರು ಎಕ್ಸ್‌ಪ್ರೆಸ್‌ ಜನವರಿ 20ರಂದು ಹಾಸನ ಹಾಗೂ ಮೈಸೂರು ನಡುವೆ ಭಾಗಶಃ ರದ್ದಾಗಲಿದೆ.

* ರೈಲು ಸಂಖ್ಯೆ 06267 ಅರಸಿಕೆರೆ – ಮೈಸೂರು ವಿಶೇಷ ಪ್ಯಾಸೆಂಜರ್‌ ಎಕ್ಸ್‌ಪ್ರೆಸ್‌ ಜನವರಿ 20ರಂದು 90 ನಿಮಿಷ ತಡವಾಗಿ ಅರಸಿಕೆರೆ ನಿಲ್ದಾಣದಿಂದ ಹೊರಡಲಿದೆ.

* ರೈಲು ಸಂಖ್ಯೆ 06269 ಮೈಸೂರು – ಸರ್‌ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಜನವರಿ 20ರಂದು ಮೈಸೂರು ನಿಲ್ದಾಣದಿಂದ 90 ನಿಮಿಷ ತಡವಾಗಿ ಹೊರಡಲಿದೆ.

* ರೈಲು ಸಂಖ್ಯೆ 06214 ಮೈಸೂರು – ಅರಸಿಕೆರೆ ವಿಶೇಷ ಎಕ್ಸ್‌ಪ್ರೆಸ್‌ ಜನವರಿ 20ರಂದು ಸಂಚರಿಸುವ ವೇಳೆಯೇ ನಿಯಂತ್ರಿಸಲ್ಪಡುವುದರಿಂದ ಸಂಚಾರದಲ್ಲಿ 45 ನಿಮಿಷ ತಡವಾಗಲಿದೆ.

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

6 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

6 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

6 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

7 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

7 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

7 hours ago