ರಾಜ್ಯ

ಮೈಸೂರು ಪ್ರಯಾಣಿಕರೇ ಗಮನಿಸಿ ಜನವರಿ 20ರಂದು ವಿಳಂಬವಾಗಲಿದೆ ಈ ರೈಲುಗಳ ಸಂಚಾರ

ಭಾರತೀಯ ರೈಲ್ವೆ ಇಲಾಖೆ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣದಿಂದಾಗಿ ಕೆಲ ರೈಲುಗಳ ಸಂಚಾರ ವಿಳಂಬವಾಗಲಿದೆ ಹಾಗೂ ಕೆಲ ರೈಲುಗಳು ಭಾಗಶಃ ರದ್ದಾದರೆ, ಇನ್ನೂ ಕೆಲ ರೈಲುಗಳು ಸಂಪೂರ್ಣವಾಗಿ ರದ್ದಾಗಲಿವೆ. ಇನ್ನು ಮೈಸೂರು ರೈಲ್ವೆ ವ್ಯಾಪ್ತಿಯ ಮಂದಗೆರೆ ನಿಲ್ದಾಣದಲ್ಲಿ ಸಿಗ್ನಲಿಂಗ್‌ ಕಾಮಗಾರಿ ನಡೆಯುವುದರಿಂದ ಜನವರಿ 20ರಂದು ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಇರಲಿದೆ. ಈ ಕುರಿತಾದ ಮಾಹಿತಿಯನ್ನು ರೈಲ್ವೆ ಇಲಾಖೆ ಹಂಚಿಕೊಂಡಿದ್ದು, ಕೆಳಕಂಡಂತಿದೆ.. 

* ರೈಲು ಸಂಖ್ಯೆ 16207 ಯಶವಂತಪುರ – ಮೈಸೂರು ಎಕ್ಸ್‌ಪ್ರೆಸ್‌ ಜನವರಿ 20ರಂದು ಹಾಸನ ಹಾಗೂ ಮೈಸೂರು ನಡುವೆ ಭಾಗಶಃ ರದ್ದಾಗಲಿದೆ.

* ರೈಲು ಸಂಖ್ಯೆ 06267 ಅರಸಿಕೆರೆ – ಮೈಸೂರು ವಿಶೇಷ ಪ್ಯಾಸೆಂಜರ್‌ ಎಕ್ಸ್‌ಪ್ರೆಸ್‌ ಜನವರಿ 20ರಂದು 90 ನಿಮಿಷ ತಡವಾಗಿ ಅರಸಿಕೆರೆ ನಿಲ್ದಾಣದಿಂದ ಹೊರಡಲಿದೆ.

* ರೈಲು ಸಂಖ್ಯೆ 06269 ಮೈಸೂರು – ಸರ್‌ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಜನವರಿ 20ರಂದು ಮೈಸೂರು ನಿಲ್ದಾಣದಿಂದ 90 ನಿಮಿಷ ತಡವಾಗಿ ಹೊರಡಲಿದೆ.

* ರೈಲು ಸಂಖ್ಯೆ 06214 ಮೈಸೂರು – ಅರಸಿಕೆರೆ ವಿಶೇಷ ಎಕ್ಸ್‌ಪ್ರೆಸ್‌ ಜನವರಿ 20ರಂದು ಸಂಚರಿಸುವ ವೇಳೆಯೇ ನಿಯಂತ್ರಿಸಲ್ಪಡುವುದರಿಂದ ಸಂಚಾರದಲ್ಲಿ 45 ನಿಮಿಷ ತಡವಾಗಲಿದೆ.

andolana

Recent Posts

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…

3 mins ago

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

8 mins ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

12 mins ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

16 mins ago

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

9 hours ago