ರಾಜ್ಯ

ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರಿಗೆ ಬಡವರ ಕಷ್ಟ ಕಾಣಿಸುತ್ತಾ?: ಸಿ.ಟಿ ರವಿ

ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಟಿ ರವಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಅಪರಾಧ ಚಟುವಟಿಕೆ ಹಿನ್ನಲೆಯಿರುವ ಒಬ್ಬ ವ್ಯಕ್ತಿ ಇಂದು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ಗೂಂಡಾ, ರೌಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಯತೀಂದ್ರ ಹರಿಹಾಯ್ದಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾಡುವಾಗ ಸಿಟಿ ರವಿ, ಯತೀಂದ್ರ ವಿರುದ್ಧ ಮಾತನಾಡಿದ್ದಾರೆ.

1982ರಲ್ಲೇ ಅಮಿತ್ ಶಾ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕರಾದವರು ಈಗ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದವು. ಆಗಲೂ ನಮ್ಮ ಮೇಲೂ ಗೂಂಡಾ ಆಕ್ಟ್ ಹಾಕಿದ್ರು ಹಾಗಾದ್ರೆ ನಾವು ಗೂಂಡಾಗಳಾ..? ಅಪ್ಪನ ದುಡ್ಡಿನಲ್ಲಿ ಚುನಾವಣೆ ಎದುರಿಸಿದ ಇವರೆಲ್ಲಾ, ಚುನಾವಣೆ ಮುಗಿದ ಮೇಲೆ ಎಲ್ಲಿರುತ್ತಾರೋ ಎಂದು ಪ್ರಶ್ನಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

36 mins ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

37 mins ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

40 mins ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

41 mins ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

43 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

46 mins ago