ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಟಿ ರವಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಅಪರಾಧ ಚಟುವಟಿಕೆ ಹಿನ್ನಲೆಯಿರುವ ಒಬ್ಬ ವ್ಯಕ್ತಿ ಇಂದು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ಗೂಂಡಾ, ರೌಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಯತೀಂದ್ರ ಹರಿಹಾಯ್ದಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾಡುವಾಗ ಸಿಟಿ ರವಿ, ಯತೀಂದ್ರ ವಿರುದ್ಧ ಮಾತನಾಡಿದ್ದಾರೆ.
1982ರಲ್ಲೇ ಅಮಿತ್ ಶಾ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕರಾದವರು ಈಗ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದವು. ಆಗಲೂ ನಮ್ಮ ಮೇಲೂ ಗೂಂಡಾ ಆಕ್ಟ್ ಹಾಕಿದ್ರು ಹಾಗಾದ್ರೆ ನಾವು ಗೂಂಡಾಗಳಾ..? ಅಪ್ಪನ ದುಡ್ಡಿನಲ್ಲಿ ಚುನಾವಣೆ ಎದುರಿಸಿದ ಇವರೆಲ್ಲಾ, ಚುನಾವಣೆ ಮುಗಿದ ಮೇಲೆ ಎಲ್ಲಿರುತ್ತಾರೋ ಎಂದು ಪ್ರಶ್ನಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…