Mysore
21
broken clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಎಸ್.ಎಂ ಕೃಷ್ಣ ಶಾಶ್ವತ ಸ್ಮಾರಕ ನಿರ್ಮಿಸಲು ಚಿಂತನೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನೆನಪಿಗಾಗಿ ಶಾಶ್ವತ ಸ್ಮಾರಕ ನಿರ್ಮಿಸಲು ಚಿಂತಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣ ಜನಸಾಮಾನ್ಯರ ಬೇಡಿಕೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

24 ವರ್ಷಗಳಿಂದಲೂ ಎಸ್.ಎಂ.ಕೃಷ್ಣ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದು, ಅವರಿಂದ ಸಾಕಷ್ಟು ಕಲಿತಿದ್ದೇನೆ. ಯಾರನ್ನೂ ಟೀಕೆ ಮಾಡದೇ ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಟೀಕೆ ಮಾಡುವವರು ಅವರನ್ನು ನೋಡಿ ಕಲಿಯಬೇಕು ಎಂದು ಹೇಳಿದರು.

ಎಸ್.ಎಂ.ಕೃಷ್ಣ ಅವರಿಗೆ ಅವರೇ ಸರಿಸಾಟಿ. ಅವರು ಅವರ ಅಧಿಕಾರಾವಧಿಯಲ್ಲಿ ರೂಪಿಸಲಾದ ಕಾರ್ಯಕ್ರಮಗಳು ಸದಾಕಾಲ ಪ್ರಸ್ತುತವಾಗಿರುತ್ತವೆ. ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರಸಚಿವರಾಗಿ ಸಲ್ಲಿಸಿರುವ ಸೇವೆ ಅಮೋಘವಾದುದು. ಮುಖ್ಯಮಂತ್ರಿಯಾಗಿದ್ದಾಗ ನಿರ್ಮಿಸಲಾದ ವಿಕಾಸಸೌಧ, ಉದ್ಯೋಗಸೌಧ, ಸ್ವಸಹಾಯ ಸಂಘಗಳ ಸ್ಥಾಪನೆ, ಬಿಸಿಯೂಟ ಯೋಜನೆ, ಕಾವೇರಿ ನೀರಾವರಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ಸಂಸ್ಥೆಗಳನ್ನು ಹಾಗೂ ಯೋಜನೆಗಳನ್ನು ಆರಂಬಿಸಿದ ಕೀರ್ತಿ ಎಸ್.ಎಂ.ಕೃಷ್ಣ ಅವರಿಗೆ ಸೇರುತ್ತದೆ ಎಂದರು.

 

Tags:
error: Content is protected !!