ಬೆಂಗಳೂರು: ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನೆನಪಿಗಾಗಿ ಶಾಶ್ವತ ಸ್ಮಾರಕ ನಿರ್ಮಿಸಲು ಚಿಂತಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣ ಜನಸಾಮಾನ್ಯರ ಬೇಡಿಕೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
24 ವರ್ಷಗಳಿಂದಲೂ ಎಸ್.ಎಂ.ಕೃಷ್ಣ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದು, ಅವರಿಂದ ಸಾಕಷ್ಟು ಕಲಿತಿದ್ದೇನೆ. ಯಾರನ್ನೂ ಟೀಕೆ ಮಾಡದೇ ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಟೀಕೆ ಮಾಡುವವರು ಅವರನ್ನು ನೋಡಿ ಕಲಿಯಬೇಕು ಎಂದು ಹೇಳಿದರು.
ಎಸ್.ಎಂ.ಕೃಷ್ಣ ಅವರಿಗೆ ಅವರೇ ಸರಿಸಾಟಿ. ಅವರು ಅವರ ಅಧಿಕಾರಾವಧಿಯಲ್ಲಿ ರೂಪಿಸಲಾದ ಕಾರ್ಯಕ್ರಮಗಳು ಸದಾಕಾಲ ಪ್ರಸ್ತುತವಾಗಿರುತ್ತವೆ. ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರಸಚಿವರಾಗಿ ಸಲ್ಲಿಸಿರುವ ಸೇವೆ ಅಮೋಘವಾದುದು. ಮುಖ್ಯಮಂತ್ರಿಯಾಗಿದ್ದಾಗ ನಿರ್ಮಿಸಲಾದ ವಿಕಾಸಸೌಧ, ಉದ್ಯೋಗಸೌಧ, ಸ್ವಸಹಾಯ ಸಂಘಗಳ ಸ್ಥಾಪನೆ, ಬಿಸಿಯೂಟ ಯೋಜನೆ, ಕಾವೇರಿ ನೀರಾವರಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ಸಂಸ್ಥೆಗಳನ್ನು ಹಾಗೂ ಯೋಜನೆಗಳನ್ನು ಆರಂಬಿಸಿದ ಕೀರ್ತಿ ಎಸ್.ಎಂ.ಕೃಷ್ಣ ಅವರಿಗೆ ಸೇರುತ್ತದೆ ಎಂದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…