ಬೆಂಗಳೂರು: ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನೆನಪಿಗಾಗಿ ಶಾಶ್ವತ ಸ್ಮಾರಕ ನಿರ್ಮಿಸಲು ಚಿಂತಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣ ಜನಸಾಮಾನ್ಯರ ಬೇಡಿಕೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
24 ವರ್ಷಗಳಿಂದಲೂ ಎಸ್.ಎಂ.ಕೃಷ್ಣ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದು, ಅವರಿಂದ ಸಾಕಷ್ಟು ಕಲಿತಿದ್ದೇನೆ. ಯಾರನ್ನೂ ಟೀಕೆ ಮಾಡದೇ ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಟೀಕೆ ಮಾಡುವವರು ಅವರನ್ನು ನೋಡಿ ಕಲಿಯಬೇಕು ಎಂದು ಹೇಳಿದರು.
ಎಸ್.ಎಂ.ಕೃಷ್ಣ ಅವರಿಗೆ ಅವರೇ ಸರಿಸಾಟಿ. ಅವರು ಅವರ ಅಧಿಕಾರಾವಧಿಯಲ್ಲಿ ರೂಪಿಸಲಾದ ಕಾರ್ಯಕ್ರಮಗಳು ಸದಾಕಾಲ ಪ್ರಸ್ತುತವಾಗಿರುತ್ತವೆ. ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರಸಚಿವರಾಗಿ ಸಲ್ಲಿಸಿರುವ ಸೇವೆ ಅಮೋಘವಾದುದು. ಮುಖ್ಯಮಂತ್ರಿಯಾಗಿದ್ದಾಗ ನಿರ್ಮಿಸಲಾದ ವಿಕಾಸಸೌಧ, ಉದ್ಯೋಗಸೌಧ, ಸ್ವಸಹಾಯ ಸಂಘಗಳ ಸ್ಥಾಪನೆ, ಬಿಸಿಯೂಟ ಯೋಜನೆ, ಕಾವೇರಿ ನೀರಾವರಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ಸಂಸ್ಥೆಗಳನ್ನು ಹಾಗೂ ಯೋಜನೆಗಳನ್ನು ಆರಂಬಿಸಿದ ಕೀರ್ತಿ ಎಸ್.ಎಂ.ಕೃಷ್ಣ ಅವರಿಗೆ ಸೇರುತ್ತದೆ ಎಂದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…