ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಿಂದುಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಮೂಲಕ ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…