ರಾಜ್ಯ

ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್‌ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್‌ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಹಿಂದುಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್‌ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಮೂಲಕ ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago