ರಾಜ್ಯ

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಜಾಗತಿಕ ತಾಪಮಾನ ಏರಿಕೆ, ತೇವಾಂಶದ ಕೊರತೆ, ಸ್ಪಷ್ಟ ಆಕಾಶದ ಪರಿಣಾಮದಿಂದಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನ 4ರಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಸ್ತುತ ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ 35 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ತಾಪಮಾನ ದಾಖಲಾಗುತ್ತಿದೆ.

ಹವಾಮಾನ ತಜ್ಞರ ಪ್ರಕಾರ, ಮಾರ್ಚ್ ಆರಂಭದಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಲಿದ್ದು, ವಿಶೇಷವಾಗಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ತೀವ್ರ ಬಿಸಿಲು ಇರುವ ಸಾಧ್ಯತೆಯಿದೆ. ಇದರಿಂದ ಜನಸಾಮಾನ್ಯರು, ವೃದ್ಧರು, ಮಕ್ಕಳು ಮತ್ತು ರೋಗಿಗಳು ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಲಾಗಿದೆ.

ಹವಾಮಾನ ಇಲಾಖೆಯ ಈ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಬೇಸಿಗೆ ಸಿದ್ಧತೆಗಳನ್ನು ತ್ವರಗತಿಯಲ್ಲಿ ಮಾಡುವಂತೆ ಸೂಚಿಸಲಾಗಿದೆ. ನೀರು ಸಂಗ್ರಹ, ವಿದ್ಯುತ್ ಪೂರೈಕೆ ಮತ್ತು ಆರೋಗ್ಯ ಸೇವೆಗಳಲ್ಲಿ ವಿಶೇಷ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರಿಗೆ ಸಲಹೆಗಳು
• ಮಧ್ಯಾಹ್ನದ ಸಮಯದಲ್ಲಿ ಹೆಚ್ಚು ಹೊರಗೆ ಓಡಾಡುವುದನ್ನು ತಪ್ಪಿಸಿ
• ಸಾಕಷ್ಟು ನೀರು ಕುಡಿಯಿರಿ
• ಬಿಸಿಲಿನಿಂದ ರಕ್ಷಣೆಗೆ ಟೋಪಿ, ಕನ್ನಡಕ, ಛತ್ರಿ ಬಳಸಿ
• ವೃದ್ಧರು ಮತ್ತು ಮಕ್ಕಳ ಆರೋಗ್ಯದತ್ತ ವಿಶೇಷ ಗಮನ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

6 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

6 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

6 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

6 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

6 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

9 hours ago