Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಇದು ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಲಕ್ಷಾಂತರ ರೈತ ಕುಟುಂಬಗಳು ಈ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವ ದುಸ್ಥಿತಿಗೆ ದೂಡಿದೆ.

ಒಂದು ಕಡೆ ಕೇಂದ್ರ ಸರ್ಕಾರದ ಜಿಎಸ್ಟಿ ದರ ಇಳಿಕೆಯಿಂದ ಜನಸಾಮಾನ್ಯರು ತಮಗೆ ಇಷ್ಟವಾದ ವಸ್ತುಗಳನ್ನು ಕೊಳ್ಳುವ ಮೂಲಕ ಸಂತೋಷದಿಂದ ದೀಪಾವಳಿ ಹಬ್ಬಕ್ಕಾಗಿ ಕಾಯುತ್ತಿದ್ದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ರೈತರು ಪರಿಹಾರಕ್ಕಾಗಿ ಕಾದು ಕಾದು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ಎದುರಾಗಿದೆ. ಈ ರೈತವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Tags:
error: Content is protected !!