ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಲಕ್ಷಾಂತರ ರೈತ ಕುಟುಂಬಗಳು ಈ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವ ದುಸ್ಥಿತಿಗೆ ದೂಡಿದೆ.
ಒಂದು ಕಡೆ ಕೇಂದ್ರ ಸರ್ಕಾರದ ಜಿಎಸ್ಟಿ ದರ ಇಳಿಕೆಯಿಂದ ಜನಸಾಮಾನ್ಯರು ತಮಗೆ ಇಷ್ಟವಾದ ವಸ್ತುಗಳನ್ನು ಕೊಳ್ಳುವ ಮೂಲಕ ಸಂತೋಷದಿಂದ ದೀಪಾವಳಿ ಹಬ್ಬಕ್ಕಾಗಿ ಕಾಯುತ್ತಿದ್ದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ರೈತರು ಪರಿಹಾರಕ್ಕಾಗಿ ಕಾದು ಕಾದು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ಎದುರಾಗಿದೆ. ಈ ರೈತವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…