ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಲಕ್ಷಾಂತರ ರೈತ ಕುಟುಂಬಗಳು ಈ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವ ದುಸ್ಥಿತಿಗೆ ದೂಡಿದೆ.
ಒಂದು ಕಡೆ ಕೇಂದ್ರ ಸರ್ಕಾರದ ಜಿಎಸ್ಟಿ ದರ ಇಳಿಕೆಯಿಂದ ಜನಸಾಮಾನ್ಯರು ತಮಗೆ ಇಷ್ಟವಾದ ವಸ್ತುಗಳನ್ನು ಕೊಳ್ಳುವ ಮೂಲಕ ಸಂತೋಷದಿಂದ ದೀಪಾವಳಿ ಹಬ್ಬಕ್ಕಾಗಿ ಕಾಯುತ್ತಿದ್ದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ರೈತರು ಪರಿಹಾರಕ್ಕಾಗಿ ಕಾದು ಕಾದು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ಎದುರಾಗಿದೆ. ಈ ರೈತವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…