ರಾಜ್ಯ

ಇದು ಮೈತ್ರಿ ಹೋರಾಟಕ್ಕೆ ಸಂದ ಜಯ: ನಿಖಿಲ್‌ ಕುಮಾರಸ್ವಾಮಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಷಿಕ್ಯೂಷನ್‌ ಬಗ್ಗೆ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, ಸಿಎಂ ವಿಚಾರಣೆಗೆ ಅನುಮತಿ ನೀಡಿರುವುದು ಮೈತ್ರಿ ಹೋರಾಟಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ. ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು.

ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ.

ಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು ಪೋಸ್ಟ್‌ ಹಂಚಿಕೊಂಡಿದ್ದು, ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

https://x.com/Nikhil_Kumar_k/status/1824692439640080832

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

5 mins ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

6 mins ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

50 mins ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

1 hour ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

1 hour ago

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

3 hours ago