ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಷಿಕ್ಯೂಷನ್ ಬಗ್ಗೆ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, ಸಿಎಂ ವಿಚಾರಣೆಗೆ ಅನುಮತಿ ನೀಡಿರುವುದು ಮೈತ್ರಿ ಹೋರಾಟಕ್ಕೆ ಸಂದ ಜಯ ಎಂದು ಹೇಳಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ. ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು.
ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ.
ಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು ಪೋಸ್ಟ್ ಹಂಚಿಕೊಂಡಿದ್ದು, ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…