ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ ಎಂದು ತಿಳಿಸಿದರು.
“1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್” ಎಂದು ತಿಳಿಸಿದರು.
“ಮುಸ್ಲಿಂ ಓಲೈಕೆ ಮಾಡುವ ಬಜೆಟ್ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ನಾವು ಎಲ್ಲಾ ವರ್ಗದವರನ್ನು ಓಲೈಕೆ ಮಾಡಬೇಕಲ್ಲವೇ. ಎಲ್ಲರನ್ನು ಸಮಾನವಾಗಿ ನೋಡಬೇಕು” ಎಂದು ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರಿಗೆ ಹೆಚ್ಚಿನ ಅನುದಾನನ ಸಿಕ್ಕಿದ್ದು, ನಿಮ್ಮ ಕನಸು ನನಸಾಗುತ್ತಿದೆ ಎಂದು ಕೇಳಿದಾಗ, “ಇದು ಕೇವಲ ನನ್ನ ಕನಸಲ್ಲ. ರಾಜ್ಯ ಹಾಗೂ ದೇಶದ ಕನಸು. ಕೇಂದ್ರ ಸರ್ಕಾರವಂತೂ ಬೆಂಗಳೂರಿಗೆ ಏನು ನೀಡಲಿಲ್ಲ. ನಮ್ಮ ಸರ್ಕಾರವಾದರೂ ನೀಡಬೇಕಲ್ಲವೇ” ಎಂದು ತಿಳಿಸಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…