ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ ಎಂದು ತಿಳಿಸಿದರು.
“1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್” ಎಂದು ತಿಳಿಸಿದರು.
“ಮುಸ್ಲಿಂ ಓಲೈಕೆ ಮಾಡುವ ಬಜೆಟ್ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ನಾವು ಎಲ್ಲಾ ವರ್ಗದವರನ್ನು ಓಲೈಕೆ ಮಾಡಬೇಕಲ್ಲವೇ. ಎಲ್ಲರನ್ನು ಸಮಾನವಾಗಿ ನೋಡಬೇಕು” ಎಂದು ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರಿಗೆ ಹೆಚ್ಚಿನ ಅನುದಾನನ ಸಿಕ್ಕಿದ್ದು, ನಿಮ್ಮ ಕನಸು ನನಸಾಗುತ್ತಿದೆ ಎಂದು ಕೇಳಿದಾಗ, “ಇದು ಕೇವಲ ನನ್ನ ಕನಸಲ್ಲ. ರಾಜ್ಯ ಹಾಗೂ ದೇಶದ ಕನಸು. ಕೇಂದ್ರ ಸರ್ಕಾರವಂತೂ ಬೆಂಗಳೂರಿಗೆ ಏನು ನೀಡಲಿಲ್ಲ. ನಮ್ಮ ಸರ್ಕಾರವಾದರೂ ನೀಡಬೇಕಲ್ಲವೇ” ಎಂದು ತಿಳಿಸಿದರು.
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…