ರಾಜ್ಯ

ಇದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿಕೆಶಿ

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ ಎಂದು ತಿಳಿಸಿದರು.

“1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್” ಎಂದು ತಿಳಿಸಿದರು.

“ಮುಸ್ಲಿಂ ಓಲೈಕೆ ಮಾಡುವ ಬಜೆಟ್ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ನಾವು ಎಲ್ಲಾ ವರ್ಗದವರನ್ನು ಓಲೈಕೆ ಮಾಡಬೇಕಲ್ಲವೇ. ಎಲ್ಲರನ್ನು ಸಮಾನವಾಗಿ ನೋಡಬೇಕು” ಎಂದು ತಿಳಿಸಿದರು.

ಬ್ರ್ಯಾಂಡ್ ಬೆಂಗಳೂರಿಗೆ ಹೆಚ್ಚಿನ ಅನುದಾನನ ಸಿಕ್ಕಿದ್ದು, ನಿಮ್ಮ ಕನಸು ನನಸಾಗುತ್ತಿದೆ ಎಂದು ಕೇಳಿದಾಗ, “ಇದು ಕೇವಲ ನನ್ನ ಕನಸಲ್ಲ. ರಾಜ್ಯ ಹಾಗೂ ದೇಶದ ಕನಸು. ಕೇಂದ್ರ ಸರ್ಕಾರವಂತೂ ಬೆಂಗಳೂರಿಗೆ ಏನು ನೀಡಲಿಲ್ಲ. ನಮ್ಮ ಸರ್ಕಾರವಾದರೂ ನೀಡಬೇಕಲ್ಲವೇ” ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago