ರಾಜ್ಯ

ಇದು ಸಿದ್ದರಾಮಯ್ಯ ನೇತೃತ್ವದ ಡೆಮಾಕ್ರಸಿ ಆಡಳಿತ ; ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ : ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇವರದು ನರೇಂದ್ರ ಮೋದಿ ರೀತಿಯ ಸರ್ವಾಧಿಕಾರ ಆಡಳಿತ ಅಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

ಶಾಸಕರು ಈಗ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರನ್ನು ಕೆಲವು ವಿಷಯದ ಬಗ್ಗೆ ಪ್ರಶ್ನಿಸಿದ್ದಾರೆ. ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಇದರಲ್ಲಿ ತಪ್ಪೇನು? ಎಂದು ತಿಳಿಸಿದ್ದಾರೆ.

ಮನೆಯ ಯಜನಮಾನನ ಮುಂದೆ ಅಳಲು ತೋಡಿಕೊಳ್ಳುವುದು ತಪ್ಪಾ? ಪ್ರಜಾಪ್ರಭುತ್ವದಲ್ಲಿ ಇದೆಲ್ಲ ಸಹಜ. ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ಇದು ಅಸಮಾಧಾನ ಅಥವಾ ಆಕ್ರೋಶ ಅಲ್ಲ, ತಮ್ಮ ಬೇಡಿಕೆ ಮಂಡಿಸಿದ್ದು. ಒಬ್ಬೊಬ್ಬರು ಒಂದೊಂದು ರೀತಿ ತಮ್ಮ ಅಹವಾಲು ಪ್ರಸ್ತುತಪಡಿಸಬಹುದು ಎಂದರು.

ನಮ್ಮ ಸರ್ಕಾರದಲ್ಲಿ ಹಣದ ಕೊರೆತೆ ಇಲ್ಲ. ಬಿಜೆಪಿಯವರು ಸುಮ್ಮನೇ ಬೊಬ್ಬೆ ಹೊಡೆಯುತ್ತಿದ್ದಾರೆ. ಹಣ ಇಲ್ಲಾ ಅಂದ್ರೆ ಇಷ್ಟೊಂದು ಅಭಿವೃದ್ಧಿ ಮಾಡೋಕೆ ಆಗುತ್ತಾ. ನಮ್ಮ ಭಾಗದ ಕಡೆ ಬನ್ನಿ ಅಭಿವೃದ್ಧಿ ಹಣ ಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕರಾದವರಿಗೆ ಹೆಚ್ಚು ಕೆಲಸ ಮಾಡಬೇಕು ಅನಿಸುತ್ತೆ. ಮೊದಲ ಬಾರಿ ಶಾಸಕರಾದವರಿಗೆ ಇನ್ನೂ ಕೆಲಸ ಮಾಡಬೇಕು ಎಂಬ ಹಂಬಲ ಇರುತ್ತದೆ. ನಾನು ಮೊದಲ ಬಾರಿ ಶಾಸಕನಾದಗಲೂ ಇದೇ ಅನಿಸುತ್ತಿತ್ತು. ಶಾಸಕರ ಬೇಡಿಕೆ ಬಗ್ಗೆ ನಮ್ಮ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಗಮನಹರಿಸುತ್ತಾರೆ ಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು.

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಾಂಕಿ ಅಲ್ಲ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ. ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಹಾಗೊಂದು ವೇಳೆ ಆಯ್ಕೆ ಮಾಡಬೇಕಾದರೆ ಪಕ್ಷದ ಅಧ್ಯಕ್ಷರು ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್‌ ನಾಯಕರು ನಿರ್ಧರಿಸುತ್ತಾರೆ. ಪಕ್ಷ ಕೊಡುವ ಜವಾಬ್ದಾರಿ ನಾನು ನಿಭಾಯಿಸುವೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಯುದ್ಧ ಎಲ್ಲಿ ನಡೆದರೂ ಸಂಕಷ್ಟ ಬರುವುದು ಅಡುಗೆ ಮನೆಯೊಳಗೆ

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…

18 mins ago

ಸಫಾರಿ ವೇಳೆ ಮೊಬೈಲ್ ನಿಷೇಧ: ವನ್ಯಜೀವಿ ಛಾಯಾಗ್ರಾಹಕರಿಂದ ಸ್ವಾಗತ: ಕೆಲ ಸಫಾರಿ ಪ್ರಿಯರಿಗೆ ಬೇಸರ

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…

28 mins ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

54 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

1 hour ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

2 hours ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

2 hours ago