ರಾಜ್ಯ

ಇದು ಸಿದ್ದರಾಮಯ್ಯ ನೇತೃತ್ವದ ಡೆಮಾಕ್ರಸಿ ಆಡಳಿತ ; ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ : ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇವರದು ನರೇಂದ್ರ ಮೋದಿ ರೀತಿಯ ಸರ್ವಾಧಿಕಾರ ಆಡಳಿತ ಅಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

ಶಾಸಕರು ಈಗ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರನ್ನು ಕೆಲವು ವಿಷಯದ ಬಗ್ಗೆ ಪ್ರಶ್ನಿಸಿದ್ದಾರೆ. ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಇದರಲ್ಲಿ ತಪ್ಪೇನು? ಎಂದು ತಿಳಿಸಿದ್ದಾರೆ.

ಮನೆಯ ಯಜನಮಾನನ ಮುಂದೆ ಅಳಲು ತೋಡಿಕೊಳ್ಳುವುದು ತಪ್ಪಾ? ಪ್ರಜಾಪ್ರಭುತ್ವದಲ್ಲಿ ಇದೆಲ್ಲ ಸಹಜ. ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ಇದು ಅಸಮಾಧಾನ ಅಥವಾ ಆಕ್ರೋಶ ಅಲ್ಲ, ತಮ್ಮ ಬೇಡಿಕೆ ಮಂಡಿಸಿದ್ದು. ಒಬ್ಬೊಬ್ಬರು ಒಂದೊಂದು ರೀತಿ ತಮ್ಮ ಅಹವಾಲು ಪ್ರಸ್ತುತಪಡಿಸಬಹುದು ಎಂದರು.

ನಮ್ಮ ಸರ್ಕಾರದಲ್ಲಿ ಹಣದ ಕೊರೆತೆ ಇಲ್ಲ. ಬಿಜೆಪಿಯವರು ಸುಮ್ಮನೇ ಬೊಬ್ಬೆ ಹೊಡೆಯುತ್ತಿದ್ದಾರೆ. ಹಣ ಇಲ್ಲಾ ಅಂದ್ರೆ ಇಷ್ಟೊಂದು ಅಭಿವೃದ್ಧಿ ಮಾಡೋಕೆ ಆಗುತ್ತಾ. ನಮ್ಮ ಭಾಗದ ಕಡೆ ಬನ್ನಿ ಅಭಿವೃದ್ಧಿ ಹಣ ಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕರಾದವರಿಗೆ ಹೆಚ್ಚು ಕೆಲಸ ಮಾಡಬೇಕು ಅನಿಸುತ್ತೆ. ಮೊದಲ ಬಾರಿ ಶಾಸಕರಾದವರಿಗೆ ಇನ್ನೂ ಕೆಲಸ ಮಾಡಬೇಕು ಎಂಬ ಹಂಬಲ ಇರುತ್ತದೆ. ನಾನು ಮೊದಲ ಬಾರಿ ಶಾಸಕನಾದಗಲೂ ಇದೇ ಅನಿಸುತ್ತಿತ್ತು. ಶಾಸಕರ ಬೇಡಿಕೆ ಬಗ್ಗೆ ನಮ್ಮ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಗಮನಹರಿಸುತ್ತಾರೆ ಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು.

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಾಂಕಿ ಅಲ್ಲ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ. ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಹಾಗೊಂದು ವೇಳೆ ಆಯ್ಕೆ ಮಾಡಬೇಕಾದರೆ ಪಕ್ಷದ ಅಧ್ಯಕ್ಷರು ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್‌ ನಾಯಕರು ನಿರ್ಧರಿಸುತ್ತಾರೆ. ಪಕ್ಷ ಕೊಡುವ ಜವಾಬ್ದಾರಿ ನಾನು ನಿಭಾಯಿಸುವೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago