ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ಫಾಸ್ಟ್ಗಾಗಿ ಮನೆಗೆ ಆಹ್ವಾನಿಸಿದ್ದರು. ಹಾಗಾಗಿ ಒಪ್ಪಿ ಬಂದಿದ್ದೆ. ಇಬ್ಬರೂ ಸೇರಿ ಉಪಹಾರ ಸೇವಿಸಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಮೊನ್ನೆ ನಮ್ಮ ಮನೆಗೆ ಬ್ರೇಕ್ಫಾಸ್ಟ್ಗೆ ಬಂದಾಗ ನನ್ನನ್ನೂ ಮಂಗಳವಾರ ಬ್ರೇಕ್ಫಾಸ್ಟ್ಗೆ ಬನ್ನಿ ಎಂದು ಆಹ್ವಾನಿಸಿದ್ದರು. ಹಾಗಾಗಿ ಬಂದಿದ್ದೆ. ಇಬ್ಬರೂ ಸೇರಿ ಬ್ರೇಕ್ಫಾಸ್ಟ್ ಮಾಡಿದ್ದು, ಪಕ್ಷದ ವಿಚಾರ, ಅಧಿವೇಶನದ ವಿಚಾರ ಸೇರಿದಂತೆ ಎಲ್ಲವನ್ನೂ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಡಿಸೆಂಬರ್.8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದ್ದೇವೆ. ರಾಜ್ಯದ ಅಭಿವೃದ್ಧಿ ಕೆಲಸ, ರೈತರ ಸಮಸ್ಯೆ, ಬೆಳೆ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ಬೆಳೆಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪ ಮಾಡಿದರೂ ಎದುರಿಸುತ್ತೇವೆ. ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇದೆ ಎಂದು ಹೇಳಿದರು.
ಇನ್ನು ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ಏನು ಹೇಳುತ್ತಾರೆ ಅದೃಂತೆ ನಡೆದುಕೊಳ್ಳುತ್ತೇವೆ. ಅವರ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…