ಬೆಂಗಳೂರು: ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ.
ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ವರ್ಷ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇಕಡಾ.25ರಷ್ಟು ಮಳೆ ಕೊರತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿತ್ತು. ಹಲವು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೂ ಸಹ ಭಾರೀ ಸಮಸ್ಯೆ ಉಂಟಾಗಿತ್ತು. ಆದರೆ ಈ ಬಾರಿ ಮುಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದೆ.
ಜೂನ್ಮತ್ತು ಜುಲೈನಲ್ಲಿ ವಾಡಿಕೆಗಿಂತಲೂ ಅಧಿಕ ಮಳೆಯಾಗಿದ್ದು, 1994ರ ನಂತರ ಸುರಿದ ಅತೀ ಹೆಚ್ಚು ಹಾಗೂ ದಾಖಲೆಯ ಮಳೆ ಈ ವರ್ಷ ಆಗಿದೆ ಎಂದು ಅಂದಾಜಿಸಲಾಗಿದೆ.
ಒಟ್ಟಾರೆಯಾಗಿ ವಾಡಿಕೆ ಪ್ರಕಾರ ರಾಜ್ಯದಲ್ಲಿ 463 ಮಿ ಮೀ ಮಳೆಯಾಗಬೇಕು. ಆದರೆ ಈ ಬಾರಿ 593 ಮಿ.ಮೀ ಮಳೆಯಾಗುವ ಮೂಲಕ ಶೇಕಡಾ 28ರಷ್ಟು ಹೆಚ್ಚಿನ ಮಳೆಯಾಗಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯಾದ ಪರಿಣಾಮ ಜಲಾಶಯಗಳು ಕೂಡ ಸಂಪೂರ್ಣ ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಅನ್ನದಾತರಿಗೆ ತೀವ್ರ ಸಂತೋಷವಾಗಿದ್ದು, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಲ್ಲಿದ್ದಾರೆ.
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…