ರಾಜ್ಯ

ಈ ವರ್ಷವೂ ಬಂಡೀಪುರದಲ್ಲಿ ಹೊಸ ವರ್ಷ ಆಚರಣೆಯಿಲ್ಲ

ಚಾಮರಾಜನಗರ : ಬಂಡಿಪುರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಬ್ರೇಕ್ ಹಾಕಲಾಗಿದ್ದು ಬಂಡಿಪುರದಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದ್ದು, ಜಂಗಲ್ ರೆಸಾರ್ಡ್, ಖಾಸಗಿ ರೆಸಾರ್ಟ್, ಹೋಂ ಸ್ಟೇಗಳಿಗೆ ಯಾವುದೇ ನಿರ್ಬಂಧವಿಲ್ಲ. ಜೊತೆಗೆ ಎಂದಿನಂತೆ ಸಫಾರಿ ವ್ಯವಸ್ಥೆ ಕೂಡ ಇರಲಿದೆ ಎಂದು ಬಂಡಿಪುರದ ಸಿಎಫ್ ಡಾ.ರಮೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಭ್ರಮಾಚರಣೆಯ ಹೆಸರಿನಲ್ಲಿ ವನ್ಯ ಜೀವಿಗಳಿಗೆ ತೊಂದರೆ ಹಿನ್ನಲೆ ಹೊ ವರ್ಷ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ. ವಾರಾಂತ್ಯದಲ್ಲಿ ಬಂಡಿಪುರದ ವಸತಿ ಗೃಹಗಳಿಗೆ ಬಹು ಬೇಡಿಕೆಯಿದ್ದು ಡಿ.31 ಮತ್ತು ಜ.1 ರಂದು ಎರಡು ದಿನಗಳ ಕಾಲ ಮಾತ್ರ ನಿಷೇಧಿಸಲಾಗಿದೆ.

ಮೋಜು,ಮಸ್ತಿ ಮಾಡಲು ಬರುವ ಪ್ರವಾಸಿಗರಿಗೆ ಸರ್ಕಾರಿ ವಸತಿ ಗೃಹಗಳಿಗೆ ಪ್ರವಾಸ ನಿಷೇಧಿಸಿದ್ದು, ಕೆಲವು ವರ್ಷಗಳಿಂದ ಹೊಸವರ್ಷದ ಸಂಭ್ರಮಾಚರಣೆಗೆ ಅರಣ್ಯ ಇಲಾಖೆ ಬ್ರೇಕ್‌ ಹಾಕಿದೆ..

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

7 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

10 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

10 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

10 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

10 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

10 hours ago