ಚಾಮರಾಜನಗರ : ಬಂಡಿಪುರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಬ್ರೇಕ್ ಹಾಕಲಾಗಿದ್ದು ಬಂಡಿಪುರದಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದ್ದು, ಜಂಗಲ್ ರೆಸಾರ್ಡ್, ಖಾಸಗಿ ರೆಸಾರ್ಟ್, ಹೋಂ ಸ್ಟೇಗಳಿಗೆ ಯಾವುದೇ ನಿರ್ಬಂಧವಿಲ್ಲ. ಜೊತೆಗೆ ಎಂದಿನಂತೆ ಸಫಾರಿ ವ್ಯವಸ್ಥೆ ಕೂಡ ಇರಲಿದೆ ಎಂದು ಬಂಡಿಪುರದ ಸಿಎಫ್ ಡಾ.ರಮೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಸಂಭ್ರಮಾಚರಣೆಯ ಹೆಸರಿನಲ್ಲಿ ವನ್ಯ ಜೀವಿಗಳಿಗೆ ತೊಂದರೆ ಹಿನ್ನಲೆ ಹೊ ವರ್ಷ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ. ವಾರಾಂತ್ಯದಲ್ಲಿ ಬಂಡಿಪುರದ ವಸತಿ ಗೃಹಗಳಿಗೆ ಬಹು ಬೇಡಿಕೆಯಿದ್ದು ಡಿ.31 ಮತ್ತು ಜ.1 ರಂದು ಎರಡು ದಿನಗಳ ಕಾಲ ಮಾತ್ರ ನಿಷೇಧಿಸಲಾಗಿದೆ.
ಮೋಜು,ಮಸ್ತಿ ಮಾಡಲು ಬರುವ ಪ್ರವಾಸಿಗರಿಗೆ ಸರ್ಕಾರಿ ವಸತಿ ಗೃಹಗಳಿಗೆ ಪ್ರವಾಸ ನಿಷೇಧಿಸಿದ್ದು, ಕೆಲವು ವರ್ಷಗಳಿಂದ ಹೊಸವರ್ಷದ ಸಂಭ್ರಮಾಚರಣೆಗೆ ಅರಣ್ಯ ಇಲಾಖೆ ಬ್ರೇಕ್ ಹಾಕಿದೆ..
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…