ರಾಜ್ಯ

ಕರಾಳ ದಿನಾಚರಣೆ ಮಾಡುವವರಿಗೆ ತಾಯಿನೆಲದ ತಿಳುವಳಿಕೆ ಬೇಕು: ಸತೀಶ್ ಜಾರಕಿಹೊಳಿ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನ ಆಚರಣೆ ಮಾಡುವವರಿಗೆ ತಾಯ್ನೆಲದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಯವರು ಸರ್ಕಾರದ ಅನುಮತಿ ಇಲ್ಲದೆಯೂ ಕರಾಳ ದಿನಾಚರಣೆ ಮಾಡುತ್ತಾರೆ. ಇಲ್ಲಿಯೇ ವಾಸ ಮಾಡುವ ಅವರಿಗೆ ತಿಳುವಳಿಕೆ ಬರಬೇಕು. ಹಕ್ಕುಗಳಿಗಾಗಿ ಭಾಷಣ ಮಾಡಲಿ, ಆದರೆ ಸರ್ಕಾರವನ್ನು ವಿರೋಧ ಮಾಡುವುದು ಸರಿಯಲ್ಲ ಎಂದರು.

ಯಾವುದೇ ಕಾರ್ಯಕ್ರಮವಾದರೂ ರಕ್ಷಣೆ ನೀಡುವುದು ಪೊಲೀಸರ ಜವಾಬ್ದಾರಿ. ಒಂದು ವೇಳೆ ರಕ್ಷಣೆ ನೀಡದೆ ಇದ್ದರೆ ಗಲಾಟೆಯಾದರೆ ಯಾರು ಹೊಣೆ ಅದಕ್ಕಾಗಿ ರಕ್ಷಣಾ ವ್ಯವಸ್ಥೆ ಮಾಡಲಾಗುತ್ತದೆ. ಅದನ್ನು ಎಂಇಎಸ್‍ಗೆ ರಕ್ಷಣೆ ಎಂದು ಬಿಂಬಿಸಬೇಕಿಲ್ಲ ಎಂದರು.

ಸರ್ಕಾರ ನಾಡ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತದೆ. ಆದರೆ ಪ್ರಕರಣ ನ್ಯಾಯಾಲಯಕ್ಕೆ ಹೋದ ಮೇಲೆ ನಾವು ಏನು ಮಾಡಲಾಗುವುದಿಲ್ಲ. ನ್ಯಾಯಾಲಯದಲ್ಲಿ ಜಾಮೀನು ದೊರೆಯುತ್ತದೆ, ಕೆಲವೊಮ್ಮೆ ಪ್ರಕರಣವು ವಜಾಗೊಳ್ಳುತ್ತದೆ ಎಂದರು.

ಈ ಬಾರಿ ಮುನ್ನೆಚ್ಚರಿಕೆಯಾಗಿ 35 ಜನರನ್ನು ಬಂಧಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿದ್ದ ಪೊಲೀಸ್ ಅಧಿಕಾರಿ ಸಚಿವರಿಗೆ ಮಾಹಿತಿ ನೀಡಿದರು. ಮುಂದುವರೆದ ಸಚಿವ ಸತೀಶ್ ಜಾರಕಿಹೊಳಿ, ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕು ಎಂಬುದು ಎಲ್ಲಾ ಕಡೆಯಿಂದ ಪಕ್ಷಾತೀತವಾಗಿ ಬೇಡಿಕೆಯಾಗಿದೆ. ಆದರೆ ಅದಕ್ಕೂ ಮಹೂರ್ತ ಕೂಡಿ ಬರಬೇಕು, ಹಣಕಾಸು ಲಭ್ಯತೆ ನೋಡಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ವಿಭಜನೆಗೂ ಮೊದಲು ಬೆಳಗಾವಿ ತಾಲ್ಲೂಕು ವಿಭಜನೆಯಾಗಬೇಕಿದೆ. ಪ್ರಸ್ತುತ ತಾಲ್ಲೂಕಿನಲ್ಲಿ ಎಂಟುವರೆ ಲಕ್ಷ ಮತದಾರರಿದ್ದಾರೆ. 11 ಲಕ್ಷ ಜನಸಂಖ್ಯೆ ಇದೆ. ನಿಗದಿತ ಪ್ರಮಾಣಕ್ಕಿಂತಲೂ ಶೇ.20ರಷ್ಟು ಹೆಚ್ಚು ಜನಸಂಖ್ಯೆ ಇದೆ. ಉಡುಪಿ ಜಿಲ್ಲೆಯಲ್ಲಿ ಎಂಟು ಲಕ್ಷ ಜನಸಂಖ್ಯೆ ಇದ್ದರೇ ಅದಕ್ಕಿಂತಲೂ ಹೆಚ್ಚು ಜನ ಬೆಳಗಾವಿ ತಾಲ್ಲೂಕಿನಲ್ಲಿ ವಾಸಿಸುತ್ತಿದ್ದಾರೆ. ಆದಷ್ಟು ಶೀಘ್ರ ತಾಲ್ಲೂಕು ವಿಭಜನೆ ಮಾಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಚಿವ ಸಂಪುಟ ಸಭೆಯಲ್ಲಿ ಮನವಿ ಮಾಡಿದ್ದಾರೆ ಎಂದರು.

ಬೆಳಗಾವಿ ನಗರ ಒಂದು ತಾಲ್ಲೂಕು ಆಗಲಿದೆ, ಬೆಳಗಾವಿ ಗ್ರಾಮೀಣ ಪ್ರತ್ಯೇಕ ತಾಲ್ಲೂಕು ಆಗಲಿದೆ. ಬೆಳಗಾವಿ ಮಹಾನಗರ ಪಾಲಿಕೆಗೆ 12 ಗ್ರಾಮ ಪಂಚಾಯತ್‍ಗಳನ್ನು ಸೇರ್ಪಡೆ ಮಾಡಲಾಗುವುದು ಎಂದರು.

andolanait

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

11 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

12 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

13 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

14 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

14 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

15 hours ago