ರಾಜ್ಯ

ಕರಾಳ ದಿನಾಚರಣೆ ಮಾಡುವವರಿಗೆ ತಾಯಿನೆಲದ ತಿಳುವಳಿಕೆ ಬೇಕು: ಸತೀಶ್ ಜಾರಕಿಹೊಳಿ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನ ಆಚರಣೆ ಮಾಡುವವರಿಗೆ ತಾಯ್ನೆಲದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಯವರು ಸರ್ಕಾರದ ಅನುಮತಿ ಇಲ್ಲದೆಯೂ ಕರಾಳ ದಿನಾಚರಣೆ ಮಾಡುತ್ತಾರೆ. ಇಲ್ಲಿಯೇ ವಾಸ ಮಾಡುವ ಅವರಿಗೆ ತಿಳುವಳಿಕೆ ಬರಬೇಕು. ಹಕ್ಕುಗಳಿಗಾಗಿ ಭಾಷಣ ಮಾಡಲಿ, ಆದರೆ ಸರ್ಕಾರವನ್ನು ವಿರೋಧ ಮಾಡುವುದು ಸರಿಯಲ್ಲ ಎಂದರು.

ಯಾವುದೇ ಕಾರ್ಯಕ್ರಮವಾದರೂ ರಕ್ಷಣೆ ನೀಡುವುದು ಪೊಲೀಸರ ಜವಾಬ್ದಾರಿ. ಒಂದು ವೇಳೆ ರಕ್ಷಣೆ ನೀಡದೆ ಇದ್ದರೆ ಗಲಾಟೆಯಾದರೆ ಯಾರು ಹೊಣೆ ಅದಕ್ಕಾಗಿ ರಕ್ಷಣಾ ವ್ಯವಸ್ಥೆ ಮಾಡಲಾಗುತ್ತದೆ. ಅದನ್ನು ಎಂಇಎಸ್‍ಗೆ ರಕ್ಷಣೆ ಎಂದು ಬಿಂಬಿಸಬೇಕಿಲ್ಲ ಎಂದರು.

ಸರ್ಕಾರ ನಾಡ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತದೆ. ಆದರೆ ಪ್ರಕರಣ ನ್ಯಾಯಾಲಯಕ್ಕೆ ಹೋದ ಮೇಲೆ ನಾವು ಏನು ಮಾಡಲಾಗುವುದಿಲ್ಲ. ನ್ಯಾಯಾಲಯದಲ್ಲಿ ಜಾಮೀನು ದೊರೆಯುತ್ತದೆ, ಕೆಲವೊಮ್ಮೆ ಪ್ರಕರಣವು ವಜಾಗೊಳ್ಳುತ್ತದೆ ಎಂದರು.

ಈ ಬಾರಿ ಮುನ್ನೆಚ್ಚರಿಕೆಯಾಗಿ 35 ಜನರನ್ನು ಬಂಧಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿದ್ದ ಪೊಲೀಸ್ ಅಧಿಕಾರಿ ಸಚಿವರಿಗೆ ಮಾಹಿತಿ ನೀಡಿದರು. ಮುಂದುವರೆದ ಸಚಿವ ಸತೀಶ್ ಜಾರಕಿಹೊಳಿ, ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕು ಎಂಬುದು ಎಲ್ಲಾ ಕಡೆಯಿಂದ ಪಕ್ಷಾತೀತವಾಗಿ ಬೇಡಿಕೆಯಾಗಿದೆ. ಆದರೆ ಅದಕ್ಕೂ ಮಹೂರ್ತ ಕೂಡಿ ಬರಬೇಕು, ಹಣಕಾಸು ಲಭ್ಯತೆ ನೋಡಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ವಿಭಜನೆಗೂ ಮೊದಲು ಬೆಳಗಾವಿ ತಾಲ್ಲೂಕು ವಿಭಜನೆಯಾಗಬೇಕಿದೆ. ಪ್ರಸ್ತುತ ತಾಲ್ಲೂಕಿನಲ್ಲಿ ಎಂಟುವರೆ ಲಕ್ಷ ಮತದಾರರಿದ್ದಾರೆ. 11 ಲಕ್ಷ ಜನಸಂಖ್ಯೆ ಇದೆ. ನಿಗದಿತ ಪ್ರಮಾಣಕ್ಕಿಂತಲೂ ಶೇ.20ರಷ್ಟು ಹೆಚ್ಚು ಜನಸಂಖ್ಯೆ ಇದೆ. ಉಡುಪಿ ಜಿಲ್ಲೆಯಲ್ಲಿ ಎಂಟು ಲಕ್ಷ ಜನಸಂಖ್ಯೆ ಇದ್ದರೇ ಅದಕ್ಕಿಂತಲೂ ಹೆಚ್ಚು ಜನ ಬೆಳಗಾವಿ ತಾಲ್ಲೂಕಿನಲ್ಲಿ ವಾಸಿಸುತ್ತಿದ್ದಾರೆ. ಆದಷ್ಟು ಶೀಘ್ರ ತಾಲ್ಲೂಕು ವಿಭಜನೆ ಮಾಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಚಿವ ಸಂಪುಟ ಸಭೆಯಲ್ಲಿ ಮನವಿ ಮಾಡಿದ್ದಾರೆ ಎಂದರು.

ಬೆಳಗಾವಿ ನಗರ ಒಂದು ತಾಲ್ಲೂಕು ಆಗಲಿದೆ, ಬೆಳಗಾವಿ ಗ್ರಾಮೀಣ ಪ್ರತ್ಯೇಕ ತಾಲ್ಲೂಕು ಆಗಲಿದೆ. ಬೆಳಗಾವಿ ಮಹಾನಗರ ಪಾಲಿಕೆಗೆ 12 ಗ್ರಾಮ ಪಂಚಾಯತ್‍ಗಳನ್ನು ಸೇರ್ಪಡೆ ಮಾಡಲಾಗುವುದು ಎಂದರು.

andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

7 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

8 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

8 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

8 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

8 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

9 hours ago