ರಾಜ್ಯ

ಗಂಗಾರತಿ ಒಪ್ಪುವವರು ಕಾವೇರಿ ಆರತಿಗೇಕೆ ವಿರೋಧ : ಬಿಜೆಪಿಗೆ ಶಾಸಕ ರವಿಕುಮಾರ್ ಗಣಿಗ ತಿರುಗೇಟು

ಬೆಂಗಳೂರು : ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಗಂಗಾ ಆರತಿ ಬೇಕು ಎಂದಿದ್ದಾರೆ. ಕರ್ನಾಟಕದಲ್ಲಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಾರೆ. ಅವರಿಗೆ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದಷ್ಟೇ ಮುಖ್ಯ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲ ಶಾಸಕರ ಅಸಮಾಧಾನದ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಚರ್ಚಿಸಿ ಬಗೆಹರಿಸುತ್ತಾರೆ. ಆರೇಳು ಬಾರಿ ಗೆದ್ದ ಹಿರಿಯ ಶಾಸಕರು ಕಾಂಗ್ರೆಸ್‌ನಲ್ಲಿದ್ದಾರೆ. ಶಾಸಕಾಂಗ ಸಭೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಚರ್ಚೆ ಮಾಡಲು ಅವಕಾಶ ಇದೆ. ಅದನ್ನು ಬಿಟ್ಟು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ವಸತಿ ಯೋಜನೆಗಳಲ್ಲಿ ಬಡವರಿಂದ ಹಣ ಪಡೆಯುವ ದಾರಿದ್ರ್ಯ ಜಮೀರ್ ಅಹಮದ್ ಖಾನ್ ಅವರಿಗಿಲ್ಲ. ಸಾಕಷ್ಟು ದಾನ ಧರ್ಮ ಮಾಡಿ ಹೆಸರುವಾಸಿಯಾಗಿರುವ ಜಮೀರ್ ವಸತಿ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ.2022ರಲ್ಲಿ ಮನೆ ಮಂಜೂರಾತಿ ಪಡೆದಿದ್ದವರಿಗೆ ಈಗ ಸ್ವಾಽನ ಪತ್ರ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಆದಿಯಾಗಿ ಎಲ್ಲರೂ ಸೇರಿಯೇ ಶಾಸಕರಿಗೆ ಅನುದಾನ ನೀಡುತ್ತಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರ ಅನುಮತಿಯೂ ಅಗತ್ಯವಿದೆ ಎಂದು ಹೇಳಿದ ಗಣಿಗ ರವಿ, ಅನುದಾನ ಬೇಕಿದ್ದರೆ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲಿ ಎಂದು ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

9 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

10 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

11 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

11 hours ago