ರಾಜ್ಯ

ಗಂಗಾರತಿ ಒಪ್ಪುವವರು ಕಾವೇರಿ ಆರತಿಗೇಕೆ ವಿರೋಧ : ಬಿಜೆಪಿಗೆ ಶಾಸಕ ರವಿಕುಮಾರ್ ಗಣಿಗ ತಿರುಗೇಟು

ಬೆಂಗಳೂರು : ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಗಂಗಾ ಆರತಿ ಬೇಕು ಎಂದಿದ್ದಾರೆ. ಕರ್ನಾಟಕದಲ್ಲಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಾರೆ. ಅವರಿಗೆ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದಷ್ಟೇ ಮುಖ್ಯ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲ ಶಾಸಕರ ಅಸಮಾಧಾನದ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಚರ್ಚಿಸಿ ಬಗೆಹರಿಸುತ್ತಾರೆ. ಆರೇಳು ಬಾರಿ ಗೆದ್ದ ಹಿರಿಯ ಶಾಸಕರು ಕಾಂಗ್ರೆಸ್‌ನಲ್ಲಿದ್ದಾರೆ. ಶಾಸಕಾಂಗ ಸಭೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಚರ್ಚೆ ಮಾಡಲು ಅವಕಾಶ ಇದೆ. ಅದನ್ನು ಬಿಟ್ಟು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ವಸತಿ ಯೋಜನೆಗಳಲ್ಲಿ ಬಡವರಿಂದ ಹಣ ಪಡೆಯುವ ದಾರಿದ್ರ್ಯ ಜಮೀರ್ ಅಹಮದ್ ಖಾನ್ ಅವರಿಗಿಲ್ಲ. ಸಾಕಷ್ಟು ದಾನ ಧರ್ಮ ಮಾಡಿ ಹೆಸರುವಾಸಿಯಾಗಿರುವ ಜಮೀರ್ ವಸತಿ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ.2022ರಲ್ಲಿ ಮನೆ ಮಂಜೂರಾತಿ ಪಡೆದಿದ್ದವರಿಗೆ ಈಗ ಸ್ವಾಽನ ಪತ್ರ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಆದಿಯಾಗಿ ಎಲ್ಲರೂ ಸೇರಿಯೇ ಶಾಸಕರಿಗೆ ಅನುದಾನ ನೀಡುತ್ತಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರ ಅನುಮತಿಯೂ ಅಗತ್ಯವಿದೆ ಎಂದು ಹೇಳಿದ ಗಣಿಗ ರವಿ, ಅನುದಾನ ಬೇಕಿದ್ದರೆ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲಿ ಎಂದು ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

14 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago