ಬೆಂಗಳೂರು : ಕುಣಿಯಲಾರದವರು ನೆಲ ಡೊಂಕು ಅಂತಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಹಿನ್ನೆಲೆ ನಗರದ ಟೌನ್ ಹಾಲ್ ಬಳಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ಅವರ ಸರ್ಕಾರ ಉಳಿಸಿಕೊಳ್ಳಲು ಆಗಿಲ್ಲ ಅದಕ್ಕೆ ಏನೇನೋ ಹೇಳ್ತಾರೆ. ಅವರು ಸಿಎಂ ಆಗಿದ್ದಾಗ ಎಲ್ಲಿದ್ರು ಎಂದು ಎಲ್ಲರಿಗೂ ಗೊತ್ತಿದೆ. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲೇ ಇದ್ರಲ್ಲ, ಯಾಕೆ ಅಲ್ಲಿದ್ರು ಎಂದು ಪ್ರಶ್ನಿಸಿದರು.
ಈ ಹಿಂದೆ ಕಾವೇರಿ ನಿವಾಸ ಬಿಟ್ಟು ಕೊಡದ ವಿಚಾರವಾಗಿ ಮಾತನಾಡಿದ ಸಿಎಂ, ಬಿಟ್ಟು ಕೊಡಿ ಎಂದು ಕೇಳಿದ್ರೆ ಕೊಡ್ತಿದ್ದೆ. ಯಡಿಯೂರಪ್ಪ ತುಂಬಾ ಸಮಯ ಅಲ್ಲೇ ಇದ್ರಲ್ಲ, ಅದಕ್ಕೆ ಏನು ಹೇಳ್ತಾರೆ? ಒಂದು ವರ್ಷ 10 ತಿಂಗಳ ಬದಲು 2 ವರ್ಷ ಇದ್ರಲ್ಲ ಅದರ ಬಗ್ಗೆ ಏನು ಹೇಳ್ತಾರೆ? ಜಾರ್ಜ್ ಗೆ ಆ ಮನೆ ಅಲರ್ಟ್ ಆಗಿತ್ತು, ಜಾರ್ಜ್ ನನಗೆ ಕೊಟ್ಟಿದ್ದರು. ಕಾವೇರಿ ನಿವಾಸ ಅದು ಡೆಲಿಗೇಟೆಡ್ ಕ್ವಾಟರ್ಸ್ ಅಲ್ಲ. ಅಲ್ಲಿ ಯಾರು ಬೇಕಾದರು ಇರಬಹುದು ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…